AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪ್ರದಾಯ ಬದಿಗಿಟ್ಟು.. ಹಾಸನಾಂಬ ದೇಗುಲ ಮುಚ್ಚಲು ನಿರ್ಧಾರ: ಜಿಲ್ಲಾಡಳಿತದ ನಡೆಗೆ ಭಕ್ತರ ಆಕ್ರೋಶ

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಬಂದು ಹೋಗ್ತಾರೆ. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ದರ್ಶನಕ್ಕೆ ಕೆಲವು ನಿರ್ಬಂಧನೆಗಳನ್ನು ವಿಧಿಸಲಾಗಿದೆ. ಆದರೂ ಸಹ ಸಾವಿರಾರು ಭಕ್ತರು ದೇವಿಯ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಈ ನಡುವೆ ನಾಳೆ ಹಾಸನಾಂಬ ದೇಗುಲದ ಬಾಗಿಲು ಮುಚ್ಚಲು ಹಾಸನ ಜಿಲ್ಲಾಡಳಿತದ ನಿರ್ಧಾರ ಮಾಡಿದ್ದು ಇದಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶಾಸ್ತ್ರ, ಸಂಪ್ರದಾಯಕ್ಕೆ ವಿರುದ್ಧವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಜಿಲ್ಲಾಡಳಿತ ಸಜ್ಜಾಗಿದೆ. ಹಾಸನಾಂಬೆ ದರ್ಶನ […]

ಸಂಪ್ರದಾಯ ಬದಿಗಿಟ್ಟು.. ಹಾಸನಾಂಬ ದೇಗುಲ ಮುಚ್ಚಲು ನಿರ್ಧಾರ: ಜಿಲ್ಲಾಡಳಿತದ ನಡೆಗೆ ಭಕ್ತರ ಆಕ್ರೋಶ
ಆಯೇಷಾ ಬಾನು
|

Updated on:Nov 15, 2020 | 12:21 PM

Share

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಬಂದು ಹೋಗ್ತಾರೆ. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ದರ್ಶನಕ್ಕೆ ಕೆಲವು ನಿರ್ಬಂಧನೆಗಳನ್ನು ವಿಧಿಸಲಾಗಿದೆ. ಆದರೂ ಸಹ ಸಾವಿರಾರು ಭಕ್ತರು ದೇವಿಯ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಈ ನಡುವೆ ನಾಳೆ ಹಾಸನಾಂಬ ದೇಗುಲದ ಬಾಗಿಲು ಮುಚ್ಚಲು ಹಾಸನ ಜಿಲ್ಲಾಡಳಿತದ ನಿರ್ಧಾರ ಮಾಡಿದ್ದು ಇದಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಶಾಸ್ತ್ರ, ಸಂಪ್ರದಾಯಕ್ಕೆ ವಿರುದ್ಧವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಜಿಲ್ಲಾಡಳಿತ ಸಜ್ಜಾಗಿದೆ. ಹಾಸನಾಂಬೆ ದರ್ಶನ ಕೊನೆಗೊಳಿಸೋ ವಿಚಾರದಲ್ಲಿ ಪುರೋಹಿತರ ನಡುವೆಯೇ ಭಿನ್ನಾಭಿಪ್ರಾಯ ಉಂಟಾಗಿದೆ. ಬಲಿಪಾಡ್ಯಮಿಯ ಮರುದಿನ ದೇಗುಲದ ಬಾಗಿಲು ಮುಚ್ಚುತ್ತಿದ್ದ ಸಂಪ್ರದಾಯಕ್ಕೆ ಬ್ರೇಕ್ ಹಾಕಿ. ಈ ಬಾರಿ ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚಲು ತೀರ್ಮಾನ ಮಾಡಲಾಗಿದೆ. ಪಂಚಾಂಗದ ಉಲ್ಲೇಖ ಕಡೆಗಣಿಸಿ ಸಂಪ್ರದಾಯಕ್ಕೆ ವಿರುದ್ಧವಾಗಿ ಬಾಗಿಲು ಮುಚ್ಚಲಾಗುತ್ತಿದೆ ಎಂದು ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.

ಶತಮಾನಗಳ ಸಂಪ್ರದಾಯ ಮುರಿಯುತ್ತಿರೋ ಬಗ್ಗೆ ಹಲವು ಪುರೋಹಿತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಗೂ ಒಂಟಿಕೊಪ್ಪಲ್ ಪಂಚಾಂಗದಲ್ಲಿನ ಉಲ್ಲೇಖ‌ ಕಡೆಗಣಿಸಲಾಗಿದೆ ಎಂದು ಭಕ್ತರು ಆಕ್ರೋಶಗೊಂಡಿದ್ದಾರೆ. ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚುತ್ತಿರುವುದರಿಂದ ಮುಂದೆ ಗಂಡಾಂತರ ಕಾದಿದೆ ಎಂದು ಆತಂಕಕ್ಕೊಳಗಾಗಿದ್ದಾರೆ. ನವೆಂಬರ್ 16 ರ ಸೋಮವಾರ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಆದ್ರೆ ಸಂಪ್ರದಾಯಬದ್ಧವಾಗಿ ಬಲಿಪಾಡ್ಯಮಿಯ ಮಾರನೇ ದಿನ ಅಂದ್ರೆ ಮಂಗಳವಾರ ಬಾಗಿಲು ಮುಚ್ಚಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

Published On - 12:20 pm, Sun, 15 November 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು