AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ‌ ಭಕ್ತರಿಗಿಲ್ಲ ಹಾಸನಾಂಬೆಯ ನೇರ ದರ್ಶನ.. ಮತ್ತೆ ದರ್ಶನ ಪಡೆಯೋದು ಹೇಗೆ?

ಹಾಸನ: ಜಿಲ್ಲೆಯ ಅಧಿದೇವತೆಯಾದ ಹಾಸನಾಂಬೆಯ ದೇವಸ್ಥಾನದಲ್ಲಿ ಈ ಬಾರಿ ಭಕ್ತಾದಿಗಳಿಗೆ ನೇರ ದರ್ಶನ ಪಡೆಯುವ ಅವಕಾಶ ಇರುವುದಿಲ್ಲ. ಈ ಬಾರಿ ಹಾಸನಾಂಬೆಯ ದರ್ಶನವನ್ನು ಪಡೆಯಲು ಆನ್​ಲೈನ್​ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ. ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ವರ್ಷ ನವೆಂಬರ್ 5ರಿಂದ 17 ರವರೆಗೆ ತೆರೆಯಲಾಗುವುದು. ಆದರೆ, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಹಾಸನಾಂಬೆಯ ಉತ್ಸವವು ಈ ಸಲ ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತವಾಗಿರುವುದು. ಪ್ರತಿವರ್ಷ ದೇವಿ […]

ಈ ಬಾರಿ‌ ಭಕ್ತರಿಗಿಲ್ಲ ಹಾಸನಾಂಬೆಯ ನೇರ ದರ್ಶನ.. ಮತ್ತೆ ದರ್ಶನ ಪಡೆಯೋದು ಹೇಗೆ?
ಹಾಸನಾಂಬೆ ದೇವಾಲಯ (ಸಂಗ್ರಹ ಚಿತ್ರ)
KUSHAL V
| Edited By: |

Updated on: Oct 02, 2020 | 12:35 PM

Share

ಹಾಸನ: ಜಿಲ್ಲೆಯ ಅಧಿದೇವತೆಯಾದ ಹಾಸನಾಂಬೆಯ ದೇವಸ್ಥಾನದಲ್ಲಿ ಈ ಬಾರಿ ಭಕ್ತಾದಿಗಳಿಗೆ ನೇರ ದರ್ಶನ ಪಡೆಯುವ ಅವಕಾಶ ಇರುವುದಿಲ್ಲ. ಈ ಬಾರಿ ಹಾಸನಾಂಬೆಯ ದರ್ಶನವನ್ನು ಪಡೆಯಲು ಆನ್​ಲೈನ್​ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ.

ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ವರ್ಷ ನವೆಂಬರ್ 5ರಿಂದ 17 ರವರೆಗೆ ತೆರೆಯಲಾಗುವುದು. ಆದರೆ, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಹಾಸನಾಂಬೆಯ ಉತ್ಸವವು ಈ ಸಲ ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತವಾಗಿರುವುದು.

ಪ್ರತಿವರ್ಷ ದೇವಿ ದರ್ಶನ ಪಡೆಯಲು ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಿದ್ದರು. ಆದರೆ, ಕೊವಿಡ್ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಮೊದಲ ಹಾಗೂ ಕೊನೆಯ ದಿನ‌ ಮಾತ್ರ ಸರಳ‌ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾದಿಕಾರಿ ಆರ್ ಗಿರೀಶ್ ಹೇಳಿದ್ದಾರೆ.

ದೇವಿಯ ದರ್ಶನದ ಲೈವ್ ಟೆಲಿಕಾಸ್ಟ್​ ಮಾಡಿ ಆನ್​ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಜೊತೆಗೆ, LED ಪರದೆಗಳ ಮೂಲಕವೂ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡುವ ಚಿಂತನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಸಭೆಯ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತವು ತಿಳಿಸಿದೆ.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ