AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ನಿಂದ ಧನುಶ್ರೀ ಔಟ್​! ಎಲಿಮಿನೇಟ್​ ಆಗಿದ್ದಕ್ಕೆ ಇಲ್ಲಿದೆ ಬಲವಾದ ಕಾರಣ

Bigg Boss Kannada Elimination: ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರ ಮೊದಲ ವಾರದ ಎಲಿಮಿನೇಷನ್​ ಕೌತುಕಕ್ಕೆ ತೆರೆ ಬಿದ್ದಿದೆ. ಧನುಶ್ರೀ ಅವರು ದೊಡ್ಮನೆಯಿಂದ ಹೊರಬಿದ್ದಿದ್ದಾರೆ.

Bigg Boss Kannada: ಬಿಗ್​ ಬಾಸ್​ನಿಂದ ಧನುಶ್ರೀ ಔಟ್​! ಎಲಿಮಿನೇಟ್​ ಆಗಿದ್ದಕ್ಕೆ ಇಲ್ಲಿದೆ ಬಲವಾದ ಕಾರಣ
ಬಿಗ್​ ಬಾಸ್​ 8 ರಿಂದ ಹೊರಬಿದ್ದ ಧನುಶ್ರೀ
guruganesh bhat
| Updated By: Digi Tech Desk|

Updated on:Mar 08, 2021 | 11:43 AM

Share

ಟ್ರೋಫಿ ಗೆಲ್ಲುವ ಕನಸು ಕಟ್ಟಿಕೊಂಡು ಬಿಗ್​ ಬಾಸ್​ ಮನೆಯೊಳಗೆ ಕಾಲಿಟ್ಟಿದ್ದ ಧನುಶ್ರೀ ಅವರಿಗೆ ತೀವ್ರ ನಿರಾಸೆ ಆಗಿದೆ. ಭಾನುವಾರ (ಮಾ.7) ಅವರು ಎಲಿಮಿನೇಟ್​ ಆಗಿದ್ದಾರೆ. ಈ ವಾರ ನಾಮಿನೇಟ್ ಆಗಿದ್ದ ಶುಭಾ ಪೂಂಜಾ ಮತ್ತು ವಿಶ್ವನಾಥ್​ ಶನಿವಾರವೇ ಸೇಫ್ ಆಗಿದ್ದರು. ನಿರ್ಮಲಾ ಚೆನ್ನಪ್ಪ, ರಘು ಮತ್ತು ಧನುಶ್ರೀಗೆ ಢವಢವ ಮುಂದುವರಿದಿತ್ತು. ಅಂತಿಮವಾಗಿ ಧನುಶ್ರೀ ಅವರಿಗೆ ಅದೃಷ್ಟ ಕೈಕೊಟ್ಟಿದೆ.

ಫೆ.28ರಂದು ಅದ್ದೂರಿಯಾಗಿ ಆರಂಭವಾದ ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಶೋಗೆ 17 ಜನ ಸ್ಪರ್ಧಿಗಳು ಆಯ್ಕೆ ಆಗಿದ್ದರು. ಧನುಶ್ರೀ ಅವರ ಎಲಿಮಿನೇಷನ್​ ಬಳಿಕ ಈಗ 16 ಸ್ಪರ್ಧಿಗಳ ನಡುವೆ ಪೈಪೋಟಿ ಮುಂದುವರಿದಿದೆ. ಎರಡನೇ ವಾರವೂ ಶಮಂತ್​ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಮನೆಯಿಂದ ಹೊರಬಿದ್ದ ಧನುಶ್ರೀ ಅವರನ್ನು ಇನ್ನುಳಿದ ಸ್ಪರ್ಧಿಗಳು ಭಾವುಕವಾಗಿ ಬೀಳ್ಕೊಟ್ಟಿದ್ದಾರೆ.

ಅಷ್ಟಕ್ಕೂ ಅವರು ಮೊದಲ ವಾರವೇ ಎಲಿಮಿನೇಟ್​ ಆಗಿದ್ದಕ್ಕೆ ಕಾರಣ ಏನು? ಬಿಗ್ ಬಾಸ್ ಮನೆಯೊಳಗೆ ಕಾಲಿಡುವುದಕ್ಕೂ ಮುನ್ನ ಟಿಕ್ ಟಾಕ್ ವಿಡಿಯೋಗಳ ಮೂಲಕ ಧನುಶ್ರೀ ಫೇಮಸ್ ಆಗಿದ್ದರು. ಆದರೆ ಬಿಗ್ ಬಾಸ್ ಮನೆಯೊಳಗೆ ಮನರಂಜನೆ ನೀಡುವಲ್ಲಿ ಅವರು ಎಡವಿದರು. ಟಾಸ್ಕ್ ವಿಚಾರದಲ್ಲಿಯೂ ಅವರು ಹಿಂದೆ ಬಿದ್ದರು. ಈ ಕಾರಣಕ್ಕಾಗಿ ಅವರನ್ನು ‘ಕಳಪೆ’ ಸ್ಪರ್ಧಿ ಎಂದು ಬ್ರ್ಯಾಂಡ್ ಮಾಡಲಾಯಿತು. ನಂತರ ಒಂದು ದಿನ ಜೈಲಿಗೂ ಕಳಿಸಲಾಗಿತ್ತು.

ಮನೆಯಿಂದ ಹೊರಬರುವುದಕ್ಕೂ ಮುನ್ನ ಧನುಶ್ರೀಗೆ ಬಿಗ್ ಬಾಸ್ ಒಂದು ವಿಶೇಷ ಅಧಿಕಾರ ನೀಡಿದರು. ಮನೆಯಲ್ಲಿ ಇರುವ ಒಬ್ಬರನ್ನು ಮುಂದಿನ ವಾರದ ನಾಮಿನೇಷನ್ ಇಂದ ಪಾರು ಮಾಡುವ ಅವಕಾಶವನ್ನು ಅವರಿಗೆ ನೀಡಲಾಯಿತು. ಹಾಗಾಗಿ ರಘು ಅವರನ್ನು ಧನುಶ್ರೀ ಸೇಫ್ ಮಾಡಿದರು. ‘ರಘು ತಮ್ಮ ಸಾಮರ್ಥ್ಯವನ್ನು ಖಂಡಿತಾ ಸಾಬೀತುಪಡಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನಗೆ ಇದೆ. ಅದಕ್ಕಾಗಿ ಅವರಿಗೆ ಕಾಲಾವಕಾಶ ಬೇಕು’ ಎಂದು ತಮ್ಮ ಆಯ್ಕೆಗೆ ಧನುಶ್ರೀ ಕಾರಣ ನೀಡಿದರು.

ಇದನ್ನೂ ಓದಿ: 7 ಭಾರಿ ಬಿಗ್ ಬಾಸ್ ಆಫರ್ ತಿರಸ್ಕರಿಸಿದ ನಟಿ ಶುಭ ಪೂಂಜಾ

Bigg Boss Kannada Elimination: ಮೊದಲ ವಾರವೇ ಟಿಕ್​ಟಾಕ್​ ಸ್ಟಾರ್​ ಧನುಶ್ರೀಯನ್ನು ಟಾರ್ಗೆಟ್​ ಮಾಡಿದ್ದೇಕೆ ಬಿಗ್​ ಬಾಸ್​?

Published On - 10:09 pm, Sun, 7 March 21

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ