AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಇಟ್ಕೊಂಡು ಬ್ಲ್ಯಾಕ್​ಮೇಲ್​ ಮಾಡೋರನ್ನು ಬಂಧಿಸಲಿ, ನಾನು ತನಿಖೆಗೆ ಸಹಕಾರ ಕೊಡ್ತೀನಿ: ದಿನೇಶ್ ಕಲ್ಲಹಳ್ಳಿ

Ramesh Jarkiholi CD Controversy: ತನಿಖೆಗೆ ಬೇಕಾದ ಪೂರಕ ದಾಖಲೆಗಳನ್ನು ನಾನು ಒದಗಿಸುತ್ತೇನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇನೆ. ನನಗೆ ಭದ್ರತೆ ನೀಡಿಲ್ಲವಾದರೂ ತನಿಖೆಗೆ ಸಹಕಾರವಾಗಲಿ ಎಂಬ ಕಾರಣಕ್ಕೆ ಬಂದಿದ್ದೇನೆ. ದೂರಿನಲ್ಲಿರುವ ಸತ್ಯಾಸತ್ಯತೆಯ ಬಗ್ಗೆ ತನಿಖೆ ಆಗಬೇಕು ಎಂದು ದಿನೇಶ್ ಕಲ್ಲಹಳ್ಳಿ ಹೇಳಿದ್ಧಾರೆ.

ಸಿಡಿ ಇಟ್ಕೊಂಡು ಬ್ಲ್ಯಾಕ್​ಮೇಲ್​ ಮಾಡೋರನ್ನು ಬಂಧಿಸಲಿ, ನಾನು ತನಿಖೆಗೆ ಸಹಕಾರ ಕೊಡ್ತೀನಿ: ದಿನೇಶ್ ಕಲ್ಲಹಳ್ಳಿ
ದಿನೇಶ್ ಕಲ್ಲಹಳ್ಳಿ
Skanda
|

Updated on:Mar 05, 2021 | 5:34 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿಯನ್ನ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಯಾರು ಬ್ಲ್ಯಾಕ್​ಮೇಲ್ ಮಾಡ್ತಿದ್ದಾರೋ ಅವರನ್ನ ಬಂಧಿಸಲಿ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆ ಬಳಿ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ತನಿಖೆಗೆ ಬೇಕಾದ ಪೂರಕ ದಾಖಲೆಗಳನ್ನು ನಾನು ಒದಗಿಸುತ್ತೇನೆ. ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇನೆ. ನನಗೆ ಭದ್ರತೆ ನೀಡಿಲ್ಲವಾದರೂ ತನಿಖೆಗೆ ಸಹಕಾರವಾಗಲಿ ಎಂಬ ಕಾರಣಕ್ಕೆ ಬಂದಿದ್ದೇನೆ. ದೂರಿನಲ್ಲಿರುವ ಸತ್ಯಾಸತ್ಯತೆಯ ಬಗ್ಗೆ ತನಿಖೆ ಆಗಬೇಕು. ಈ ವಿಚಾರದಲ್ಲಿ ಯಾರೇ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದರೂ ಅವರನ್ನು ಬಂಧಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದೇನು? ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇದು 200 % ಬ್ಲಾಕ್ ಮೇಲ್ ಎಂದು ಬಣ್ಣಿಸಿದ್ದಾರೆ. ಈ ಮೂಲಕ ಈಗ ನಡೆಯುತ್ತಿರುವ ಚರ್ಚೆಗೆ ಹೊಸದೊಂದು ಆಯಾಮ ನೀಡಿದ್ದಾರೆ. ಇದೇ ವಿಚಾರದ ಕುರಿತು ಮಾತನಾಡಿರುವ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. ಅವರ ಪ್ರಕಾರ ಈ ಸಿಡಿ ವಿಚಾರದಲ್ಲಿ 5 ಕೋಟಿ ರೂಪಾಯಿ ವ್ಯವಹಾರ ಆಗಿದೆ ಎಂದು ಹೇಳಿದ್ದಾರೆ. ಆದರೆ, ರೂ 5 ಕೋಟಿಯನ್ನು ಯಾರು, ಯಾರಿಗೆ ಮತ್ತು ಎಲ್ಲಿ ಕೊಟ್ಟರು? ಎಂಬ ವಿಚಾರವನ್ನು ಅವರು ಹೊರಹಾಕಿಲ್ಲ. ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ಮಾಡಿರುವ ದಿನೇಶ್ ಕಲ್ಲಹಳ್ಳಿ ತನ್ನ ಬಳಿ ಇನ್ನೂ ಮೂರು ಸಿಡಿ ಇದೆ. ಅದನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಈಗಾಗಲೇ ಮಾಧ್ಯಮದ ಮುಂದೆ ಅನೇಕ ಬಾರಿ ಹೇಳಿದ್ದಾರೆ. ಆದರೆ ಆ ಮೂರು ಸಿಡಿಗಳಲ್ಲಿ ಇಬ್ಬರು ರಾಜಾರಣಿಗಳಲ್ಲ. ಹಾಗೊಮ್ಮೆ ಅದನ್ನು ಬಿಡುಗಡೆ ಮಾಡಿದರೆ, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿ ಆಗುತ್ತದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೆಚ್.​ಡಿ.ಕುಮಾರಸ್ವಾಮಿ ಲೆಕ್ಕಾಚಾರ: ರಮೇಶ್ ಜಾರಕಿಹೊಳಿ ಸಿಡಿ ಮಾಡಲು 5 ಕೋಟಿ ರೂಪಾಯಿ ಡೀಲ್

ವಿಡಿಯೋ ಸಾಕ್ಷ್ಯ ಸಾಕಾಗಲ್ಲ, ದಾರೀಲಿ ಹೋಗುವವರು ದೂರು ಕೊಟ್ರೆ FIR ಹಾಕೋಕೆ ಆಗಲ್ಲ; ಜಾರಕಿಹೊಳಿ ಪರ​ ವಕೀಲ ರಮೇಶ್ ಬ್ಯಾಟಿಂಗ್

Published On - 1:23 pm, Fri, 5 March 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ