AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ. ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ […]

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 08, 2020 | 2:49 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ.

ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ಮಾಡಿಲ್ಲ. ಟೆಸ್ಟ್ ಮಾಡದೆ ಆಸ್ಪತ್ರೆಯ ಸಿಬ್ಬಂದಿ ಕಾನ್ಸ್‌ಟೇಬಲ್​ನ ಮನೆಗೆ ಕಳಿಸಿದ್ದರು.

ನಂತರ ಕರ್ತವ್ಯಕ್ಕೆ ಹಾಜರಾಗುವುದಕ್ಕೂ ಮುನ್ನ ಅಂದ್ರೆ ಜುಲೈ 4ರಂದು ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಪಿಸಿಗೆ ಸೋಂಕು ಇರುವುದು ದೃಢವಾಗಿದೆ. ಈಗ ಕಾನ್ಸ್‌ಟೇಬಲ್ ಜತೆಗಿದ್ದವರಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಡಿಸ್ಚಾರ್ಜ್​ಗೂ ಮುನ್ನ ಕೊರೊನಾ ಟೆಸ್ಟ್ ಮಾಡಬೇಕು ಎಂಬ ಸಂಗತಿ ಮರೆತು ಆರೋಗ್ಯ ಇಲಾಖೆಯ ಎಡವಟ್ಟು ಮಾಡಿದೆ. ಈ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

Published On - 9:55 am, Wed, 8 July 20

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್