AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ

ನಗರಾದದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ
ಪ್ರತಿಭಟನಾಕಾರರು ಬಸ್​ ಎದುರು ಮಲಗಿರುವುದು (ಎಡ), ವರ್ತಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ (ಬಲ)
Lakshmi Hegde
| Edited By: |

Updated on:Dec 05, 2020 | 10:37 AM

Share

ಹಾಸನ: ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಂದ್ ನಡೆಯುತ್ತಿದ್ದು, ನಗರದ ಎನ್​.ಆರ್​. ವೃತ್ತದಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ್ದಾರೆ.

ಅದಾಗಲೇ ಬೆಳಗ್ಗೆಯಿಂದ ಸಂಚಾರ ಆರಂಭಿಸಿದ್ದ ಬಸ್​ಗಳಿಗೆ ಅಡ್ಡಮಲಗಿದವರನ್ನು ಪೊಲೀಸರು ಚದುರಿಸಿದ್ದಾರೆ. ಇನ್ನು ಬಿಎಂ ರಸ್ತೆಯ ಬಳಿ ತೆರೆದಿರುವ ಹೋಟೆಲ್, ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ. ಬಂದ್​ಗೆ ಕರೆ ಕೊಟ್ಟಿದ್ದರೂ ಯಾಕಾಗಿ ವ್ಯಾಪಾರ ನಡೆಸುತ್ತಿದ್ದೀರಿ ಎಂದು ಆವಾಜ್ ಹಾಕುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ವರ್ತಕರ ನಡುವೆ ವಾಗ್ವಾದ ನಡೆಯುತ್ತಿದೆ. ದರ್ಪದಿಂದ ಹೇಳಿದರೆ ಬಂದ್ ಮಾಡೋದಿಲ್ಲ.. ಮನವಿ ಮಾಡಿ ಎಂದು ವ್ಯಾಪಾರಿಗಳು ತಿರುಗೇಟು ನೀಡಿದ್ದಾರೆ.

ಅದರಲ್ಲೂ ಓರ್ವ ವರ್ತಕನಂತೂ, ಯಾರದ್ದೋ ಸಾವಾಗಿದೆ..ತುರ್ತಾಗಿ ಒಂದಷ್ಟು ಸಾಮಾನು ಬೇಕು ಎಂದು ಬಂದಿದ್ದಾರೆ. ಅವರಿಗೆ ಕೊಡೋದು ತಪ್ಪಾ? ಸಮಾಧಾನದಿಂದ ಹೇಳಿ, ಹೀಗೆಲ್ಲ ಕೂಗಾಡಬೇಡಿ, ಸಮಾಧಾನದಿಂದ ಹೇಳಿದರೆ ನಾವೂ ಕ್ಲೋಸ್ ಮಾಡುತ್ತೇವೆ ಎಂದು ಖಾರವಾಗಿಯೇ ಹೇಳಿದ್ದಾರೆ.

ನಗರದಾದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

Published On - 10:24 am, Sat, 5 December 20

Follow Us
Lakshmi Hegde
Lakshmi Hegde
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​