AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ

ನಗರಾದದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ
ಪ್ರತಿಭಟನಾಕಾರರು ಬಸ್​ ಎದುರು ಮಲಗಿರುವುದು (ಎಡ), ವರ್ತಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ (ಬಲ)
Follow us
Lakshmi Hegde
| Updated By: ganapathi bhat

Updated on:Dec 05, 2020 | 10:37 AM

ಹಾಸನ: ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಂದ್ ನಡೆಯುತ್ತಿದ್ದು, ನಗರದ ಎನ್​.ಆರ್​. ವೃತ್ತದಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ್ದಾರೆ.

ಅದಾಗಲೇ ಬೆಳಗ್ಗೆಯಿಂದ ಸಂಚಾರ ಆರಂಭಿಸಿದ್ದ ಬಸ್​ಗಳಿಗೆ ಅಡ್ಡಮಲಗಿದವರನ್ನು ಪೊಲೀಸರು ಚದುರಿಸಿದ್ದಾರೆ. ಇನ್ನು ಬಿಎಂ ರಸ್ತೆಯ ಬಳಿ ತೆರೆದಿರುವ ಹೋಟೆಲ್, ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ. ಬಂದ್​ಗೆ ಕರೆ ಕೊಟ್ಟಿದ್ದರೂ ಯಾಕಾಗಿ ವ್ಯಾಪಾರ ನಡೆಸುತ್ತಿದ್ದೀರಿ ಎಂದು ಆವಾಜ್ ಹಾಕುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ವರ್ತಕರ ನಡುವೆ ವಾಗ್ವಾದ ನಡೆಯುತ್ತಿದೆ. ದರ್ಪದಿಂದ ಹೇಳಿದರೆ ಬಂದ್ ಮಾಡೋದಿಲ್ಲ.. ಮನವಿ ಮಾಡಿ ಎಂದು ವ್ಯಾಪಾರಿಗಳು ತಿರುಗೇಟು ನೀಡಿದ್ದಾರೆ.

ಅದರಲ್ಲೂ ಓರ್ವ ವರ್ತಕನಂತೂ, ಯಾರದ್ದೋ ಸಾವಾಗಿದೆ..ತುರ್ತಾಗಿ ಒಂದಷ್ಟು ಸಾಮಾನು ಬೇಕು ಎಂದು ಬಂದಿದ್ದಾರೆ. ಅವರಿಗೆ ಕೊಡೋದು ತಪ್ಪಾ? ಸಮಾಧಾನದಿಂದ ಹೇಳಿ, ಹೀಗೆಲ್ಲ ಕೂಗಾಡಬೇಡಿ, ಸಮಾಧಾನದಿಂದ ಹೇಳಿದರೆ ನಾವೂ ಕ್ಲೋಸ್ ಮಾಡುತ್ತೇವೆ ಎಂದು ಖಾರವಾಗಿಯೇ ಹೇಳಿದ್ದಾರೆ.

ನಗರದಾದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

Published On - 10:24 am, Sat, 5 December 20

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!