AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ

ನಗರಾದದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ
ಪ್ರತಿಭಟನಾಕಾರರು ಬಸ್​ ಎದುರು ಮಲಗಿರುವುದು (ಎಡ), ವರ್ತಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ (ಬಲ)
Lakshmi Hegde
| Edited By: |

Updated on:Dec 05, 2020 | 10:37 AM

Share

ಹಾಸನ: ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಂದ್ ನಡೆಯುತ್ತಿದ್ದು, ನಗರದ ಎನ್​.ಆರ್​. ವೃತ್ತದಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ್ದಾರೆ.

ಅದಾಗಲೇ ಬೆಳಗ್ಗೆಯಿಂದ ಸಂಚಾರ ಆರಂಭಿಸಿದ್ದ ಬಸ್​ಗಳಿಗೆ ಅಡ್ಡಮಲಗಿದವರನ್ನು ಪೊಲೀಸರು ಚದುರಿಸಿದ್ದಾರೆ. ಇನ್ನು ಬಿಎಂ ರಸ್ತೆಯ ಬಳಿ ತೆರೆದಿರುವ ಹೋಟೆಲ್, ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ. ಬಂದ್​ಗೆ ಕರೆ ಕೊಟ್ಟಿದ್ದರೂ ಯಾಕಾಗಿ ವ್ಯಾಪಾರ ನಡೆಸುತ್ತಿದ್ದೀರಿ ಎಂದು ಆವಾಜ್ ಹಾಕುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ವರ್ತಕರ ನಡುವೆ ವಾಗ್ವಾದ ನಡೆಯುತ್ತಿದೆ. ದರ್ಪದಿಂದ ಹೇಳಿದರೆ ಬಂದ್ ಮಾಡೋದಿಲ್ಲ.. ಮನವಿ ಮಾಡಿ ಎಂದು ವ್ಯಾಪಾರಿಗಳು ತಿರುಗೇಟು ನೀಡಿದ್ದಾರೆ.

ಅದರಲ್ಲೂ ಓರ್ವ ವರ್ತಕನಂತೂ, ಯಾರದ್ದೋ ಸಾವಾಗಿದೆ..ತುರ್ತಾಗಿ ಒಂದಷ್ಟು ಸಾಮಾನು ಬೇಕು ಎಂದು ಬಂದಿದ್ದಾರೆ. ಅವರಿಗೆ ಕೊಡೋದು ತಪ್ಪಾ? ಸಮಾಧಾನದಿಂದ ಹೇಳಿ, ಹೀಗೆಲ್ಲ ಕೂಗಾಡಬೇಡಿ, ಸಮಾಧಾನದಿಂದ ಹೇಳಿದರೆ ನಾವೂ ಕ್ಲೋಸ್ ಮಾಡುತ್ತೇವೆ ಎಂದು ಖಾರವಾಗಿಯೇ ಹೇಳಿದ್ದಾರೆ.

ನಗರದಾದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

Published On - 10:24 am, Sat, 5 December 20

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ