AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಧಿಕಾರಿಗಳಾಗಿ ಬಾಸಿಸಂ ಬಿಡಿ: ತುಂಬಾ ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಿ -ಸಿಎಂ ಬೊಮ್ಮಾಯಿ ತಾಕೀತು

Karnataka CM Basavaraj Bommai: ಜಿಲ್ಲಾಧಿಕಾರಿಗಳು ತಮ್ಮ ಕೆಳ ಹಂತದ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿರಬೇಕು ಎಂಬುದನ್ನು ಬಿಡಿ. ವಿವೇಚನೆ ಬಳಸಿ ಕೆಲಸ ಮಾಡಿ. ತುಂಬಾ ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಮಂಜಸ ರೀತಿಯಲ್ಲಿ ಕೆಲಸ ಮಾಡದ ಡಿಸಿಗಳಿಗೆ ಸಿಎಂ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳಾಗಿ ಬಾಸಿಸಂ ಬಿಡಿ: ತುಂಬಾ ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಿ -ಸಿಎಂ ಬೊಮ್ಮಾಯಿ ತಾಕೀತು
ಜಿಲ್ಲಾಧಿಕಾರಿಗಳಾಗಿ ಬಾಸಿಸಂ ಬಿಡಿ, ಮ್ಯಾಜಿಸ್ಟ್ರೇಟ್ ತರ ಕೆಲಸ ಮಾಡಬೇಡಿ: ತುಂಬಾ ವಿನಯತೆ, ಎಚ್ಚರಿಕೆ ಇರಲಿ- ಸಿಎಂ ಬೊಮ್ಮಾಯಿ ತಾಕೀತು
TV9 Web
| Updated By: ಸಾಧು ಶ್ರೀನಾಥ್​|

Updated on:Dec 31, 2021 | 1:33 PM

Share

ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ನೇತೃತ್ವದ ನಡೆದ ಡಿಸಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳ ವಿರುದ್ಧ ಗರಂ ಆಗಿದ್ದು, ನಿಮ್ಮ ಜವಾಬ್ದಾರಿ ಅಧಿಕಾರವನ್ನು ಚಲಾಯಿಸುವುದಲ್ಲ. ಜಿಲ್ಲಾಧಿಕಾರಿಗಳು ಬಾಸ್ ಎಂಬುವುದನ್ನು ಬಿಟ್ಟುಬಿಡಿ. ಮ್ಯಾಜಿಸ್ಟ್ರೇಟ್‌ಗಳ ರೀತಿ ಕೆಲಸ ಮಾಡಬೇಡಿ ಎಂದು ರಾಜ್ಯದ ಜಿಲ್ಲಾಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ಮುಂದುವರಿದು ಮಾತನಾಡಿರುವ ಸಿಎಂ ಬೊಮ್ಮಾಯಿ ಕೆಳ ಹಂತದ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿರಬೇಕು ಎಂಬುದನ್ನು ಬಿಡಿ. ವಿವೇಚನೆ ಬಳಸಿ ಕೆಲಸ ಮಾಡಿ. ತುಂಬಾ ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾಮಾನ್ಯರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಸಮಂಜಸ ರೀತಿಯಲ್ಲಿ ಕೆಲಸ ಮಾಡದ ಡಿಸಿಗಳಿಗೆ ಸಿಎಂ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ಮಟ್ಟದ ಆಡಳಿತಾತ್ಮಕ ವಿಚಾರಗಳು, ಯೋಜನೆಗಳ ಅನುಷ್ಠಾನದ ಬಗ್ಗೆ ಡಿಸಿಗಳ ಜತೆ ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ದೀರ್ಘ ಚರ್ಚೆ ನಡೆಯಿತು. ಈ ಸಂಬಂಧ ಬರುವ ದಿನಗಳಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುವುದು. ಜನರೆಡೆಗೆ ಆಡಳಿತವನ್ನು ಇನ್ನಷ್ಟು ಹತ್ತಿರ ಕೊಂಡೊಯ್ಯುವ ಕೆಲಸ ಮಾಡಲು ಹೊಸ ಪ್ರಯತ್ನ ನಡೆಯಲಿದೆ ಎಂದು ಹೇಳೀದರು.

ಪರಿಹಾರವನ್ನ ಸರಿಯಾಗಿ ವಿಲೇವಾರಿ ಮಾಡದ ಜಿಲ್ಲಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡು ಸಿಎಂ ಬೊಮ್ಮಾಯಿ ಪರಿಹಾರ ಆ್ಯಪ್ ನಲ್ಲಿ ಅಪ್ ಲೋಡ್ ಮಾಡಿದ 48 ಗಂಟೆಗಳ ಒಳಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೊವಿಡ್ ನಿರ್ವಹಣೆ ಸಂಬಂಧ ಕೊರೊನಾ ಎದುರಿಸಲೂ ಸಹ ಪೂರ್ವ ತಯಾರಿಗೆ ಸೂಚನೆ ನೀಡಿದರು. 3ನೇ ಅಲೆಯಲ್ಲಿ ಹೆಚ್ಚು ಅನಾಹುತಗಳಿಗೆ ಅವಕಾಶ ನೀಡಬೇಡಿ. ಪರಿಸ್ಥಿತಿಗೆ ಅನುಗುಣವಾಗಿ ಕಾಲಕಾಲಕ್ಕೆ ಒಳ್ಳೇ ನಿರ್ಧಾರ ಮಾಡಿ ಎಂದು ಡಿಸಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದರು.

ಇದನ್ನು ಓದಿ: Karnataka BJP: ಬಿಜೆಪಿ ಪಕ್ಷದ ಮುಂಚೂಣಿ ನಾಯಕರಿಗೆ ತರಬೇತಿ, ಜನವರಿ 7-8 ನಂದಿ ಬೆಟ್ಟದಲ್ಲಿ ತರಬೇತಿ ಶಿಬಿರ

Published On - 12:08 pm, Fri, 31 December 21

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ