DJ ಹಳ್ಳಿ-KG ಹಳ್ಳಿ ಗಲಭೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ವಾಜಿದ್ ಪಾಷಾ ಅರೆಸ್ಟ್​

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ವಾಜಿದ್ ಪಾಷಾನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಾಜಿದ್ ಪಾಷಾ ಕರ್ನಾಟಕ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್​ನ ಅಧ್ಯಕ್ಷನಾಗಿದ್ದಾನೆ. ಈ ಮೊದಲು ಜೆಡಿಎಸ್ ಪಕ್ಷದಲ್ಲೂ ಗುರುತಿಸಿಕೊಂಡಿದ್ದ ವಾಜಿದ್ ಪಾಷಾ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಹಾಕಿದ್ದನಂತೆ. ಇದರಿಂದಾಗಿ ಆಕ್ರೋಶಗೊಂಡ ಶಾಸಕನ ಬೆಂಬಲಿಗರು ವಾಜಿದ್ ಪಾಷಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. […]

DJ ಹಳ್ಳಿ-KG ಹಳ್ಳಿ ಗಲಭೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ವಾಜಿದ್ ಪಾಷಾ ಅರೆಸ್ಟ್​
ಸಾಧು ಶ್ರೀನಾಥ್​

Updated on: Aug 17, 2020 | 7:24 PM

ಬೆಂಗಳೂರು: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ವಾಜಿದ್ ಪಾಷಾನನ್ನು ಇಂದು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಾಜಿದ್ ಪಾಷಾ ಕರ್ನಾಟಕ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್​ನ ಅಧ್ಯಕ್ಷನಾಗಿದ್ದಾನೆ. ಈ ಮೊದಲು ಜೆಡಿಎಸ್ ಪಕ್ಷದಲ್ಲೂ ಗುರುತಿಸಿಕೊಂಡಿದ್ದ ವಾಜಿದ್ ಪಾಷಾ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಹಾಕಿದ್ದನಂತೆ.

ಇದರಿಂದಾಗಿ ಆಕ್ರೋಶಗೊಂಡ ಶಾಸಕನ ಬೆಂಬಲಿಗರು ವಾಜಿದ್ ಪಾಷಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ವಾಜಿದ್ ಪಾಷಾನನ್ನು ಠಾಣೆಗೆ ಕರೆಸಿದ ಪೊಲೀಸರು, ಶಾಸಕರ ಬೆಂಬಲಿಗರು ಹಾಗೂ ವಾಜಿದ್ ಪಾಷಾ ನಡುವೆ ರಾಜಿ ಮಾಡಿಸಿ ಕಳುಹಿಸಿಕೊಟ್ಟಿದ್ದರು.

ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯ ದಿನದಂದು ಗಲಾಟೆಗೆ ಪ್ರಮುಖ ಕಾರಣವಾಗಿದ್ದ ಅವಹೇಳನಕಾರಿ ಸೋಷಿಯಲ್​ ಮೀಡಿಯಾ ಪೋಸ್ಟ್​ನ ಹಾಕಿದ್ದ ನವೀನ್​ನನ್ನ ತಕ್ಷಣವೇ ಬಂಧಿಸಬೇಕೆಂದು ನೂರಾರು ಬೆಂಬಲಿಗರೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ್ದ.

ಆಗ ಪೊಲೀಸರು ದೂರು ದಾಖಲಿಸಿಕೊಂಡ ಪರಿಶೀಲನೆ ನಡೆಸಬೇಕು. ಜೊತೆಗೆ ಎಫ್ಐಆರ್ ದಾಖಲು ಮಾಡಲು ಎರಡು ಗಂಟೆಗಳ ಕಾಲ ಸಮಯ ಬೇಕು. ಹೀಗಾಗಿ ಎಫ್ಐಆರ್ ಇಲ್ಲದೆ ಆರೋಪಿಯನ್ನು ಬಂಧಿಸುವುದು ಕಾನೂನುಬಾಹಿರವೆಂದು ಪೊಲೀಸರು ವಾಜಿದ್ ಪಾಷಾನಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಆದರೆ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ವಾಜಿದ್ ಪಾಷಾ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ. ಜೊತೆಗೆ ನವೀನ್​ನನ್ನು ಬಂಧಿಸಲು ಯಾಕೆ ಎರಡು ಗಂಟೆಗಳ ಕಾಲ ಸಮಯಬೇಕು. ಅದೇ ನಮ್ಮವರೇನಾದರು ಆಗಿದ್ದರೆ ಐದು ಸೆಕೆಂಡ್​ನಲ್ಲಿ ಬಂಧಿಸುತಿದ್ದರು ಎಂದು ಕೂಗಾಡಿದ್ದನಂತೆ.

ಬಳಿಕ ಈತನ ಅಣತಿಯಂತೆ ಜೊತೆಗೆ ಬಂದಿದ್ದ ಬೆಂಬಲಿಗರು ಪೊಲೀಸ್ ಠಾಣೆಯನ್ನು ಧ್ವಂಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ವಾಜಿದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

Published On - 7:13 pm, Mon, 17 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us