AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ಮೃತರಿಗೆ ಮೊದಲು ಕೊವಿಡ್​ ಟೆಸ್ಟ್​, ನಂತರ ಮರಣೋತ್ತರ ಪರೀಕ್ಷೆ

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ರಾತ್ರಿ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಪೈಕಿ ಇಬ್ಬರು ಡಿ.ಜೆ.ಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 20 ವರ್ಷದ ವಾಜಿದ್ ಹಾಗೂ ಏರಿಯಾದ ಶಾಂಪುರ ಮುಖ್ಯರಸ್ತೆಯ 22 ವರ್ಷದ ನಿವಾಸಿ ಯಾಸಿನ್ ಪಾಷಾ ಗೋಲಿಬಾರ್​ನಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೂರನೇ ಮೃತನ ಮಾಹಿತಿ ಇನ್ನು ದೊರೆತಿಲ್ಲ. ಇದಲ್ಲದೆ, ಗೋಲಿಬಾರ್​ನಲ್ಲಿ ಸುಮಾರು 15 ಜನರಿಗೆ ಗುಂಡು ತಗಲಿದೆ ಎಂದು ತಿಳಿದುಬಂದಿದೆ. […]

ಗೋಲಿಬಾರ್​ ಮೃತರಿಗೆ ಮೊದಲು ಕೊವಿಡ್​ ಟೆಸ್ಟ್​, ನಂತರ ಮರಣೋತ್ತರ ಪರೀಕ್ಷೆ
KUSHAL V
|

Updated on:Aug 12, 2020 | 12:44 PM

Share

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ರಾತ್ರಿ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು.

ಮೃತಪಟ್ಟ ಮೂವರ ಪೈಕಿ ಇಬ್ಬರು ಡಿ.ಜೆ.ಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 20 ವರ್ಷದ ವಾಜಿದ್ ಹಾಗೂ ಏರಿಯಾದ ಶಾಂಪುರ ಮುಖ್ಯರಸ್ತೆಯ 22 ವರ್ಷದ ನಿವಾಸಿ ಯಾಸಿನ್ ಪಾಷಾ ಗೋಲಿಬಾರ್​ನಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೂರನೇ ಮೃತನ ಮಾಹಿತಿ ಇನ್ನು ದೊರೆತಿಲ್ಲ.

ಇದಲ್ಲದೆ, ಗೋಲಿಬಾರ್​ನಲ್ಲಿ ಸುಮಾರು 15 ಜನರಿಗೆ ಗುಂಡು ತಗಲಿದೆ ಎಂದು ತಿಳಿದುಬಂದಿದೆ. ಇದರಲ್ಲಿ, 5ರಿಂದ 6 ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಮನೆಯಲ್ಲಿ ಒದ್ದಾಡುತ್ತಿದ್ದಾರೆ ಎಂಬ ಮಾಹಿತಿ ಸಹ ದೊರೆತಿದೆ. ಬಂಧನದ ಭೀತಿಯಿಂದ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ನರಳುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಇವರ ಪರಿಚಯ ಪೊಲೀಸರಿಗೂ ಸಹ ಸ್ಪಷ್ಟವಾಗಿ ಸಿಗುತ್ತಿಲ್ಲ.

ಇದೀಗ, ಗೋಲಿಬಾರ್​ನಲ್ಲಿ ಮೃತಪಟ್ಟವರ ಶವ ಪರೀಕ್ಷೆ ನಡೆಯಲಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿದೆ.

ಮರಣೋತ್ತರ ಪರೀಕ್ಷೆಗೆ ಮುನ್ನ ಮೃತರ ಕೊವಿಡ್ ಟೆಸ್ಟ್​ ಮಾಡಲಾಗುವುದು. ರಿಪೋರ್ಟ್ ಬಂದ ಮೇಲೆ ಶವ ಪರೀಕ್ಷೆ ನಡೆಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರದ ಬಳಿ ಮೃತರ ಕುಟುಂಬ ಸದಸ್ಯರು ಬಂದಿದ್ದಾರೆ. ಶವಾಗಾರದ ಬಳಿ ಯಾಸೀನ್, ವಾಜಿದ್​ ಕುಟುಂಬಸ್ಥರು ಆಗಮಿಸಿದರು.

Published On - 11:42 am, Wed, 12 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ