AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ಮೃತರಿಗೆ ಮೊದಲು ಕೊವಿಡ್​ ಟೆಸ್ಟ್​, ನಂತರ ಮರಣೋತ್ತರ ಪರೀಕ್ಷೆ

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ರಾತ್ರಿ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಪೈಕಿ ಇಬ್ಬರು ಡಿ.ಜೆ.ಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 20 ವರ್ಷದ ವಾಜಿದ್ ಹಾಗೂ ಏರಿಯಾದ ಶಾಂಪುರ ಮುಖ್ಯರಸ್ತೆಯ 22 ವರ್ಷದ ನಿವಾಸಿ ಯಾಸಿನ್ ಪಾಷಾ ಗೋಲಿಬಾರ್​ನಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೂರನೇ ಮೃತನ ಮಾಹಿತಿ ಇನ್ನು ದೊರೆತಿಲ್ಲ. ಇದಲ್ಲದೆ, ಗೋಲಿಬಾರ್​ನಲ್ಲಿ ಸುಮಾರು 15 ಜನರಿಗೆ ಗುಂಡು ತಗಲಿದೆ ಎಂದು ತಿಳಿದುಬಂದಿದೆ. […]

ಗೋಲಿಬಾರ್​ ಮೃತರಿಗೆ ಮೊದಲು ಕೊವಿಡ್​ ಟೆಸ್ಟ್​, ನಂತರ ಮರಣೋತ್ತರ ಪರೀಕ್ಷೆ
KUSHAL V
|

Updated on:Aug 12, 2020 | 12:44 PM

Share

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ರಾತ್ರಿ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು.

ಮೃತಪಟ್ಟ ಮೂವರ ಪೈಕಿ ಇಬ್ಬರು ಡಿ.ಜೆ.ಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 20 ವರ್ಷದ ವಾಜಿದ್ ಹಾಗೂ ಏರಿಯಾದ ಶಾಂಪುರ ಮುಖ್ಯರಸ್ತೆಯ 22 ವರ್ಷದ ನಿವಾಸಿ ಯಾಸಿನ್ ಪಾಷಾ ಗೋಲಿಬಾರ್​ನಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೂರನೇ ಮೃತನ ಮಾಹಿತಿ ಇನ್ನು ದೊರೆತಿಲ್ಲ.

ಇದಲ್ಲದೆ, ಗೋಲಿಬಾರ್​ನಲ್ಲಿ ಸುಮಾರು 15 ಜನರಿಗೆ ಗುಂಡು ತಗಲಿದೆ ಎಂದು ತಿಳಿದುಬಂದಿದೆ. ಇದರಲ್ಲಿ, 5ರಿಂದ 6 ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಮನೆಯಲ್ಲಿ ಒದ್ದಾಡುತ್ತಿದ್ದಾರೆ ಎಂಬ ಮಾಹಿತಿ ಸಹ ದೊರೆತಿದೆ. ಬಂಧನದ ಭೀತಿಯಿಂದ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ನರಳುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಇವರ ಪರಿಚಯ ಪೊಲೀಸರಿಗೂ ಸಹ ಸ್ಪಷ್ಟವಾಗಿ ಸಿಗುತ್ತಿಲ್ಲ.

ಇದೀಗ, ಗೋಲಿಬಾರ್​ನಲ್ಲಿ ಮೃತಪಟ್ಟವರ ಶವ ಪರೀಕ್ಷೆ ನಡೆಯಲಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿದೆ.

ಮರಣೋತ್ತರ ಪರೀಕ್ಷೆಗೆ ಮುನ್ನ ಮೃತರ ಕೊವಿಡ್ ಟೆಸ್ಟ್​ ಮಾಡಲಾಗುವುದು. ರಿಪೋರ್ಟ್ ಬಂದ ಮೇಲೆ ಶವ ಪರೀಕ್ಷೆ ನಡೆಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರದ ಬಳಿ ಮೃತರ ಕುಟುಂಬ ಸದಸ್ಯರು ಬಂದಿದ್ದಾರೆ. ಶವಾಗಾರದ ಬಳಿ ಯಾಸೀನ್, ವಾಜಿದ್​ ಕುಟುಂಬಸ್ಥರು ಆಗಮಿಸಿದರು.

Published On - 11:42 am, Wed, 12 August 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!