AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ಮೃತರಿಗೆ ಮೊದಲು ಕೊವಿಡ್​ ಟೆಸ್ಟ್​, ನಂತರ ಮರಣೋತ್ತರ ಪರೀಕ್ಷೆ

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ರಾತ್ರಿ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಪೈಕಿ ಇಬ್ಬರು ಡಿ.ಜೆ.ಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 20 ವರ್ಷದ ವಾಜಿದ್ ಹಾಗೂ ಏರಿಯಾದ ಶಾಂಪುರ ಮುಖ್ಯರಸ್ತೆಯ 22 ವರ್ಷದ ನಿವಾಸಿ ಯಾಸಿನ್ ಪಾಷಾ ಗೋಲಿಬಾರ್​ನಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೂರನೇ ಮೃತನ ಮಾಹಿತಿ ಇನ್ನು ದೊರೆತಿಲ್ಲ. ಇದಲ್ಲದೆ, ಗೋಲಿಬಾರ್​ನಲ್ಲಿ ಸುಮಾರು 15 ಜನರಿಗೆ ಗುಂಡು ತಗಲಿದೆ ಎಂದು ತಿಳಿದುಬಂದಿದೆ. […]

ಗೋಲಿಬಾರ್​ ಮೃತರಿಗೆ ಮೊದಲು ಕೊವಿಡ್​ ಟೆಸ್ಟ್​, ನಂತರ ಮರಣೋತ್ತರ ಪರೀಕ್ಷೆ
KUSHAL V
|

Updated on:Aug 12, 2020 | 12:44 PM

Share

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ರಾತ್ರಿ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು.

ಮೃತಪಟ್ಟ ಮೂವರ ಪೈಕಿ ಇಬ್ಬರು ಡಿ.ಜೆ.ಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. 20 ವರ್ಷದ ವಾಜಿದ್ ಹಾಗೂ ಏರಿಯಾದ ಶಾಂಪುರ ಮುಖ್ಯರಸ್ತೆಯ 22 ವರ್ಷದ ನಿವಾಸಿ ಯಾಸಿನ್ ಪಾಷಾ ಗೋಲಿಬಾರ್​ನಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೂರನೇ ಮೃತನ ಮಾಹಿತಿ ಇನ್ನು ದೊರೆತಿಲ್ಲ.

ಇದಲ್ಲದೆ, ಗೋಲಿಬಾರ್​ನಲ್ಲಿ ಸುಮಾರು 15 ಜನರಿಗೆ ಗುಂಡು ತಗಲಿದೆ ಎಂದು ತಿಳಿದುಬಂದಿದೆ. ಇದರಲ್ಲಿ, 5ರಿಂದ 6 ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಮನೆಯಲ್ಲಿ ಒದ್ದಾಡುತ್ತಿದ್ದಾರೆ ಎಂಬ ಮಾಹಿತಿ ಸಹ ದೊರೆತಿದೆ. ಬಂಧನದ ಭೀತಿಯಿಂದ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ನರಳುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೆ, ಇವರ ಪರಿಚಯ ಪೊಲೀಸರಿಗೂ ಸಹ ಸ್ಪಷ್ಟವಾಗಿ ಸಿಗುತ್ತಿಲ್ಲ.

ಇದೀಗ, ಗೋಲಿಬಾರ್​ನಲ್ಲಿ ಮೃತಪಟ್ಟವರ ಶವ ಪರೀಕ್ಷೆ ನಡೆಯಲಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿದೆ.

ಮರಣೋತ್ತರ ಪರೀಕ್ಷೆಗೆ ಮುನ್ನ ಮೃತರ ಕೊವಿಡ್ ಟೆಸ್ಟ್​ ಮಾಡಲಾಗುವುದು. ರಿಪೋರ್ಟ್ ಬಂದ ಮೇಲೆ ಶವ ಪರೀಕ್ಷೆ ನಡೆಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರದ ಬಳಿ ಮೃತರ ಕುಟುಂಬ ಸದಸ್ಯರು ಬಂದಿದ್ದಾರೆ. ಶವಾಗಾರದ ಬಳಿ ಯಾಸೀನ್, ವಾಜಿದ್​ ಕುಟುಂಬಸ್ಥರು ಆಗಮಿಸಿದರು.

Published On - 11:42 am, Wed, 12 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ