ಸೋನಿಯ ಗಾಂಧಿಯನ್ನು ಬ್ಲ್ಯಾಕ್​ಮೇಲ್ ಮಾಡಿ ಶಿವಕುಮಾರ್​ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ: ರಮೇಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 31, 2023 | 5:39 PM

ಶಿವಕುಮಾರ್ ಅವರನ್ನು ಮಂತ್ರಿಮಂಡಲದಿಂದ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡೋದಾಗಿ ಹೇಳಿದ ರಮೇಶ್, ಶಿವಕುಮಾರ್ ನಿಂದ ತನ್ನ ಜೀವಕ್ಕೂ ಅಪಾಯವಿದೆ ಯಾಕೆಂದರೆ ಅವನು ಯಾವುದನ್ನೂ ಮಾಡಲು ಹೇಸಲಾರ ಎಂದು ಹೇಳಿದರು.

ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಇಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸತತ ಎರಡನೇ ದಿನ ಪತ್ರಿಕಾ ಗೋಷ್ಟಿ ನಡೆಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಡಿಕೆ ಶಿವಕುಮಾರ್ (DK Shivakumar) ಬೆಂಬಲಿಗರು ಅಶ್ಲೀಲ ಪೋಸ್ಟರ್ ಅಂಟಿಸಿರುವರೆಂದು ಆರೋಪಿಸಿದ ರಮೇಶ್, ಉಪ ಮುಖ್ಯಮಂತ್ರಿಯ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು. ಶಿವಕುಮಾರ್ ಒಬ್ಬ ದೊಡ್ಡ ಬ್ಲ್ಯಾಕ್ ಮೇಲರ್ ಎಂದು ಹೇಳಿದ ರಮೇಶ್ ಏಕವಚನದಲ್ಲೇ ಅವರ ಮೇಲೆ ವಾಗ್ದಾಳಿ ನಡೆಸಿದರು. ತಿಹಾರ್ ಜೈಲಿನಲ್ಲಿದ್ದಾಗ ಭೇಟಿಯಾಗಿ ಮಾತಾಡಿಸಿದ್ದ ಸೋನಿಯ ಗಾಂಧಿ (Sonia Gandhi) ಅವರನ್ನು ಶಿವಕುಮಾರ್ ಬ್ಲ್ಯಾಕ್ ಮೇಲ್ ಮಾಡಿದ್ದ ಎಂದ ರಮೇಶ್ ಮೊದಲು ತಾನು ಅವನೊಂದಿಗೆ ಇದ್ದ ಕಾರಣ ಎಲ್ಲವೂ ಗೊತ್ತಿದೆ ಎಂದರು. ತಾನು ಪಕ್ಕದಲ್ಲಿ ಕೂತಿರುವಾಗಲೇ ಆಗ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋತಿಲಾಲ್ ವೋಹ್ರಾ ಅವರನ್ನೂ ಬ್ಲ್ಯಾಕ್ ಮೇಲ್ ಮಾಡಿದ್ದ ಎಂದು ರಮೇಶ್ ಹೇಳಿದರು. ಶಿವಕುಮಾರ್ ಅವರನ್ನು ಮಂತ್ರಿಮಂಡಲದಿಂದ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡೋದಾಗಿ ಹೇಳಿದ ರಮೇಶ್, ಶಿವಕುಮಾರ್ ನಿಂದ ತನ್ನ ಜೀವಕ್ಕೂ ಅಪಾಯವಿದೆ ಯಾಕೆಂದರೆ ಅವನು ಯಾವುದನ್ನೂ ಮಾಡಲು ಹೇಸಲಾರ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.