AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬಿಜೆಪಿ ಸರ್ಕಾರ ಬಂದ ಮೇಲೆ ಸಿಡಿ ಬಗ್ಗೆ ಎಷ್ಟು ಚರ್ಚೆ ಆಗಿದೆ. ಇದನ್ನ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ, ವಿಶ್ವನಾಥ್ ಮಾತನಾಡಿದ್ದರು ಯೋಗೇಶ್ವರ್ ಮಾತನಾಡಿದ್ರು. ಆದರೆ ಅವರು ಮಾತಾಡಿದ ಬಗ್ಗೆ ಯಾವುದೇ ತನಿಖೆ ಆಗಿಲ್ಲ ಎಂದು ಶಿವಕುಮಾರ್​ ಹೇಳಿದರು.

ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಡಿ.ಕೆ.ಶಿವಕುಮಾರ್
KUSHAL V
| Edited By: |

Updated on: Mar 13, 2021 | 4:50 PM

Share

ಶಿವಮೊಗ್ಗ: ರಮೇಶ್ ಜಾರಕಿಹೊಳಿ ಸಿಡಿ ಅಸಲಿಯೋ ಅಥವಾ ನಕಲಿಯೋ ಎಂದು ಮೊದಲು ಗೊತ್ತಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಸಿಡಿಯನ್ನ ಮೊದಲು ಎಫ್‌ಎಸ್‌ಎಲ್‌ಗೆ ಕಳುಹಿಸಿ ಕೊಡಲಿ. ಬಿಜೆಪಿ ಸರ್ಕಾರ ಬಂದ ಮೇಲೆ ಸಿಡಿ ಬಗ್ಗೆ ಎಷ್ಟು ಚರ್ಚೆ ಆಗಿದೆ. ಇದನ್ನ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ, ವಿಶ್ವನಾಥ್ ಮಾತನಾಡಿದರು ಯೋಗೇಶ್ವರ್ ಮಾತನಾಡಿದ್ರು. ಆದರೆ ಅವರು ಮಾತಾಡಿದ ಬಗ್ಗೆ ಯಾವುದೇ ತನಿಖೆ ಆಗಿಲ್ಲ ಎಂದು ಶಿವಕುಮಾರ್​ ಹೇಳಿದರು.

ಎಸ್‌ಐಟಿ ತನಿಖೆ ಮಾಡ್ತಿದೆ ಮಾಡಲಿ, ತಂಡವೂ ಚೆನ್ನಾಗಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಸಿಎಂ ಬಗ್ಗೆ ಮಾತನಾಡಿದ್ದಾರೆ. ವಿಡಿಯೋದಲ್ಲಿರೋರು ಕನ್ನಡದ ಬಗ್ಗೆಯೂ ಮಾತನಾಡಿದ್ದಾರೆ ಎಂದು ಹೇಳಿದರು.

ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ. ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ, ಮಾಡಲಿ ಬಿಡಿ. ನಮ್ಮ ಮೇಲೆ ಬರಲಿ ಬಿಡಿ. ಕಾಂಗ್ರೆಸ್ ಮೇಲೇ ಬರುವುದು ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.

ಇಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​ ಬೆನ್ನಿಗೆ ನಿಂತ ಕೈ ಪಡೆ ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್​ನ ಜನಾಕ್ರೋಶ ಪ್ರತಿಭಟನೆ ನಡೆಸಿತು. ನಂತರ, ತೆರೆದ ವಾಹನದಲ್ಲಿ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ರೆ ಮತ್ತು ಇತರೆ ಮುಖಂಡರು ಭಾಗಿಯಾಗಿ ಪ್ರತಿಭಟನಾ ಱಲಿ ನಡೆಸಿದರು. ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್​ ಕೂಡ ಭಾಗಿಯಾದರು.

ಇದನ್ನೂ ಓದಿ: ಸೆಕ್ಸ್ ಸಿಡಿ ಪ್ರಕರಣ: ಬ್ಲಾಕ್​ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ರಮೇಶ್ ಜಾರಕಿಹೊಳಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್