AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ಬಿಜೆಪಿ ಸರ್ಕಾರ ಬಂದ ಮೇಲೆ ಸಿಡಿ ಬಗ್ಗೆ ಎಷ್ಟು ಚರ್ಚೆ ಆಗಿದೆ. ಇದನ್ನ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ, ವಿಶ್ವನಾಥ್ ಮಾತನಾಡಿದ್ದರು ಯೋಗೇಶ್ವರ್ ಮಾತನಾಡಿದ್ರು. ಆದರೆ ಅವರು ಮಾತಾಡಿದ ಬಗ್ಗೆ ಯಾವುದೇ ತನಿಖೆ ಆಗಿಲ್ಲ ಎಂದು ಶಿವಕುಮಾರ್​ ಹೇಳಿದರು.

ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಡಿ.ಕೆ.ಶಿವಕುಮಾರ್
KUSHAL V
| Edited By: ಸಾಧು ಶ್ರೀನಾಥ್​|

Updated on: Mar 13, 2021 | 4:50 PM

Share

ಶಿವಮೊಗ್ಗ: ರಮೇಶ್ ಜಾರಕಿಹೊಳಿ ಸಿಡಿ ಅಸಲಿಯೋ ಅಥವಾ ನಕಲಿಯೋ ಎಂದು ಮೊದಲು ಗೊತ್ತಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಸಿಡಿಯನ್ನ ಮೊದಲು ಎಫ್‌ಎಸ್‌ಎಲ್‌ಗೆ ಕಳುಹಿಸಿ ಕೊಡಲಿ. ಬಿಜೆಪಿ ಸರ್ಕಾರ ಬಂದ ಮೇಲೆ ಸಿಡಿ ಬಗ್ಗೆ ಎಷ್ಟು ಚರ್ಚೆ ಆಗಿದೆ. ಇದನ್ನ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ, ವಿಶ್ವನಾಥ್ ಮಾತನಾಡಿದರು ಯೋಗೇಶ್ವರ್ ಮಾತನಾಡಿದ್ರು. ಆದರೆ ಅವರು ಮಾತಾಡಿದ ಬಗ್ಗೆ ಯಾವುದೇ ತನಿಖೆ ಆಗಿಲ್ಲ ಎಂದು ಶಿವಕುಮಾರ್​ ಹೇಳಿದರು.

ಎಸ್‌ಐಟಿ ತನಿಖೆ ಮಾಡ್ತಿದೆ ಮಾಡಲಿ, ತಂಡವೂ ಚೆನ್ನಾಗಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಸಿಎಂ ಬಗ್ಗೆ ಮಾತನಾಡಿದ್ದಾರೆ. ವಿಡಿಯೋದಲ್ಲಿರೋರು ಕನ್ನಡದ ಬಗ್ಗೆಯೂ ಮಾತನಾಡಿದ್ದಾರೆ ಎಂದು ಹೇಳಿದರು.

ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಮೇಲೆಯೇ ಆರೋಪ ಮಾಡ್ತಿದ್ದಾರೆ, ಮಾಡಲಿ ಬಿಡಿ. ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ, ಮಾಡಲಿ ಬಿಡಿ. ನಮ್ಮ ಮೇಲೆ ಬರಲಿ ಬಿಡಿ. ಕಾಂಗ್ರೆಸ್ ಮೇಲೇ ಬರುವುದು ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.

ಇಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​ ಬೆನ್ನಿಗೆ ನಿಂತ ಕೈ ಪಡೆ ಶಿವಮೊಗ್ಗದ KSRTC ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್​ನ ಜನಾಕ್ರೋಶ ಪ್ರತಿಭಟನೆ ನಡೆಸಿತು. ನಂತರ, ತೆರೆದ ವಾಹನದಲ್ಲಿ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ರೆ ಮತ್ತು ಇತರೆ ಮುಖಂಡರು ಭಾಗಿಯಾಗಿ ಪ್ರತಿಭಟನಾ ಱಲಿ ನಡೆಸಿದರು. ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್​ ಕೂಡ ಭಾಗಿಯಾದರು.

ಇದನ್ನೂ ಓದಿ: ಸೆಕ್ಸ್ ಸಿಡಿ ಪ್ರಕರಣ: ಬ್ಲಾಕ್​ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ರಮೇಶ್ ಜಾರಕಿಹೊಳಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ