ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ. ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು […]

ಕ್ರೈಸ್ತ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು: ಚರ್ಚ್​ನಲ್ಲಿ ಡಿ ಕೆ ಶಿವಕುಮಾರ್ ಪ್ರತ್ಯಕ್ಷ
ಸಾಧು ಶ್ರೀನಾಥ್​

Updated on: Oct 29, 2020 | 1:30 PM

ಬೆಂಗಳೂರು: ನವೆಂಬರ್ 3ರಂದು ಆರ್.ಆರ್. ನಗರ ಕ್ಷೇತ್ರದಲ್ಲಿ ಅಸೆಂಬ್ಲಿ ಉಪ‌ ಚುನಾವಣೆ ನಡೆಯಲಿದೆ. ಹೀಗಾಗಿ ಸೋಲು ಗೆಲುವಿನ ಯುದ್ಧಕ್ಕೆ ಅಖಾಡ ಸಿದ್ಧವಾಗಿದೆ. ಮೂರೂ ಪಕ್ಷಗಳು ಗೆಲುವಿಗಾಗಿ ರಣತಂತ್ರ ರೂಪಿಸಿವೆ. ಸದ್ಯ ಈಗ ಕ್ರೈಸ್ತ ಸಮುದಾಯದ ಮತದಾರರ ಮೇಲೆ ಕಾಂಗ್ರೆಸ್ ಕಣ್ಣು ಇಟ್ಟಿದೆ.

ಸ್ಥಳೀಯ ಕ್ರೈಸ್ತ ಮುಖಂಡರ ಜೊತೆ ಆರ್.ಆರ್. ನಗರ ಚರ್ಚ್​ನಲ್ಲಿ ನಡೆದ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಭಾಗಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ ಕ್ರೈಸ್ತ ಸಮುದಾಯದ ಪರ ನಾನಿದ್ದೇನೆಂದು ಹೇಳುತ್ತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾತುಗಳ ಬಗ್ಗೆ ಚರ್ಚೆ ಬೇಡ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇರುತ್ತಾನೆ. ಚುನಾವಣೆ ಮುಗಿದ ಮೇಲೆ ನಿಮ್ಮ ಬಳಿ ಮತ್ತೆ ಬರ್ತೇನೆ ಎಂದು ಹೇಳಿದ್ರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us