AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ-ವಿಜಯನಗರ ತಾಲೂಕುಗಳ ಬಗ್ಗೆ ಡಾ. ಡಿ.ಎಂ. ನಂಜುಂಡಪ್ಪ ವರದಿ ಏನು ಹೇಳುತ್ತದೆ?

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯು ಕಲ್ಯಾಣ ಕರ್ನಾಟಕ ಎಂದು ಕರೆಸಿಕೊಳ್ಳುವ ಹೈದರಾಬಾದ್ ಕರ್ನಾಟಕದ ಭಾಗಕ್ಕೆ ಒಳಪಡುತ್ತದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಮತ್ತು ರಾಜ್ಯದ ಸುಸ್ಥಿರ ಅಭಿವೃದ್ಧಿಗಾಗಿ ತಯಾರಾದ ಈ ಸಮಿತಿಯು ಪಟ್ಟಿಯಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ಒಳಪಡುವ ಆರು ಜಿಲ್ಲೆಗಳ ಪೈಕಿ ಬಳ್ಳಾರಿ ಕೂಡ ಒಂದಾಗಿದೆ. ಎರಡು ಕೇಂದ್ರಗಳು ಜಿಲ್ಲಾಡಳಿತ ಪ್ರದೇಶವಾಗಲಿವೆ.. ಈ ಅಧ್ಯಯನದ ವರದಿಯಂತೆ ಕರ್ನಾಟಕದ ತಾಲೂಕುಗಳನ್ನು ಅತ್ಯಂತ ಹಿಂದುಳಿದ, ಹೆಚ್ಚು ಹಿಂದುಳಿದ, ಹಿಂದುಳಿದ ಮತ್ತು ತುಲನಾತ್ಮಕವಾಗಿ ಅಭಿವೃದ್ಧಿ ಹೊಂದಿದ ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಅದರಂತೆ […]

ಬಳ್ಳಾರಿ-ವಿಜಯನಗರ ತಾಲೂಕುಗಳ ಬಗ್ಗೆ ಡಾ. ಡಿ.ಎಂ. ನಂಜುಂಡಪ್ಪ ವರದಿ ಏನು ಹೇಳುತ್ತದೆ?
ಪೃಥ್ವಿಶಂಕರ
|

Updated on:Nov 19, 2020 | 4:06 PM

Share

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯು ಕಲ್ಯಾಣ ಕರ್ನಾಟಕ ಎಂದು ಕರೆಸಿಕೊಳ್ಳುವ ಹೈದರಾಬಾದ್ ಕರ್ನಾಟಕದ ಭಾಗಕ್ಕೆ ಒಳಪಡುತ್ತದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಮತ್ತು ರಾಜ್ಯದ ಸುಸ್ಥಿರ ಅಭಿವೃದ್ಧಿಗಾಗಿ ತಯಾರಾದ ಈ ಸಮಿತಿಯು ಪಟ್ಟಿಯಲ್ಲಿ ಹೈದರಾಬಾದ್ ಕರ್ನಾಟಕಕ್ಕೆ ಒಳಪಡುವ ಆರು ಜಿಲ್ಲೆಗಳ ಪೈಕಿ ಬಳ್ಳಾರಿ ಕೂಡ ಒಂದಾಗಿದೆ.

ಎರಡು ಕೇಂದ್ರಗಳು ಜಿಲ್ಲಾಡಳಿತ ಪ್ರದೇಶವಾಗಲಿವೆ.. ಈ ಅಧ್ಯಯನದ ವರದಿಯಂತೆ ಕರ್ನಾಟಕದ ತಾಲೂಕುಗಳನ್ನು ಅತ್ಯಂತ ಹಿಂದುಳಿದ, ಹೆಚ್ಚು ಹಿಂದುಳಿದ, ಹಿಂದುಳಿದ ಮತ್ತು ತುಲನಾತ್ಮಕವಾಗಿ ಅಭಿವೃದ್ಧಿ ಹೊಂದಿದ ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಅದರಂತೆ ಅಖಂಡ ಬಳ್ಳಾರಿ ಜಿಲ್ಲೆಯ ಕೇಂದ್ರ ಬಳ್ಳಾರಿ ಮತ್ತು ಹೊಸಪೇಟೆ ತಾಲೂಕುಗಳನ್ನು ಅಭಿವೃದ್ಧಿ ಹೊಂದಿದ ತಾಲೂಕುಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಈಗ ಬಳ್ಳಾರಿ ಜಿಲ್ಲಾ ವಿಭಜನೆ ಆದರೆ ಈ ಎರಡು ಕೇಂದ್ರಗಳು ಜಿಲ್ಲಾಡಳಿತ ಪ್ರದೇಶವಾಗಲಿವೆ.

ಹೆಚ್ಚು ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಸಿರುಗುಪ್ಪ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ ತಾಲೂಕುಗಳಿದ್ದು, ಸಿರುಗುಪ್ಪ ಬಳ್ಳಾರಿಗೆ, ಉಳಿದೆರಡು ತಾಲೂಕುಗಳು ಹೊಸ ವಿಜಯನಗರ ಜಿಲ್ಲೆಗೆ ಹಂಚಿಹೋಗಲಿವೆ. ಅತ್ಯಂತ ಹಿಂದುಳಿದ ತಾಲೂಕುಗಳಾಗಿ  ಕೂಡ್ಲಿಗಿ, ಸಂಡೂರು ಮತ್ತು ಹರಪನಹಳ್ಳಿ ತಾಲೂಕುಗಳು ಗುರುತಿಸಿಕೊಂಡಿದ್ದು, ಕೂಡ್ಲಿಗಿ, ಸಂಡೂರು ಬಳ್ಳಾರಿಗೆ ಮತ್ತು ಹರಪನಹಳ್ಳಿ ವಿಜಯನಗರಕ್ಕೆ ದೊರಕಲಿವೆ.

ಅವಳಿ ಜಿಲ್ಲೆಗಳಿಗೆ ಸಿಗುವ ಸವಲತ್ತುಗಳು.. ಈ ಪಟ್ಟಿಯ ಅನ್ವಯ ಕೃಷಿ, ನೀರಾವರಿ ಯೋಜನೆ, ಶಿಕ್ಷಣ, ಗ್ರಾಮಾಭಿವೃದ್ಧಿ, ಸಾಮಾಜಿಕ ಸೇವೆ, ಆರೋಗ್ಯ ಮೊದಲಾದ ಸೌಲಭ್ಯಗಳು ಎರಡು ಜಿಲ್ಲೆಯ ಆಯ್ದ ತಾಲೂಕುಗಳಿಗೆ ವರದಿಯ ನಿಯಮದ ಅನ್ವಯ ಲಭ್ಯವಾಗಲಿವೆ. ಹೈದರಾಬಾದ್ ಕರ್ನಾಟಕ ಭಾಗವು, ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಹಿಂದುಳಿದ ಪ್ರದೇಶ ಎಂದು ಗುರುತಿಸಿಕೊಂಡಿದೆ. ಹೀಗಾಗಿ ಹೈದರಾಬಾದ್ ಕರ್ನಾಟಕಕ್ಕೆ ಸಿಗುವ ವಿಶೇಷ ಮುತುವರ್ಜಿಯನ್ನು ಅವಳಿ ಜಿಲ್ಲೆಗಳು ಪಡೆದುಕೊಳ್ಳಲಿವೆ.

ಕಸ್ತೂರಬಾ ಗಾಂಧಿ ಬಾಲಕಿಯರ ಶಾಲೆ, ಪಂಚ ಸೌಲಭ್ಯ ಯೋಜನೆ, ವಿಶೇಷ ಆರ್ಥಿಕ ನೆರವು, ವಿಶೇಷ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (RKVY), ಸುವರ್ಣ ಆರೋಗ್ಯ ಸುರಕ್ಷಾ ಯೋಜನೆ, ಆಶ್ರಯ ಯೋಜನೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ (KNNL), ಆರ್ಟಿಕಲ್ 371j ಮೊದಲಾದ ಸವಲತ್ತುಗಳು ಎರಡು ಜಿಲ್ಲೆಯ ಆಯ್ದ ತಾಲೂಕುಗಳ ಜನರಿಗೆ ಸಿಗಲಿವೆ.

Published On - 4:05 pm, Thu, 19 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ