AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ. ಈ ಮಧ್ಯೆ ವಿದೇಶಿ ಸರ್ಕಾರವೊಂದು ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದೆ.

'ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ'- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ
ಟೀಂ ಇಂಡಿಯಾ ಆಟಗಾರರು
ರಾಜೇಶ್ ದುಗ್ಗುಮನೆ
| Edited By: |

Updated on:Jan 03, 2021 | 2:55 PM

Share

ಟೀಂ ಇಂಡಿಯಾ ಸದ್ಯ ಆಸ್ಟ್ರೇಲಿಯಾ ನೆಲದಲ್ಲಿದ್ದು, ಏಕದಿನ, ಟಿ-20 ಸರಣಿ ಪೂರ್ಣಗೊಳಿಸಿದೆ. ಸದ್ಯ, ಟೆಸ್ಟ್​ ಸರಣಿಯ ಎರಡು ಪಂದ್ಯಗಳನ್ನು ಆಡಿದ್ದು, ಇನ್ನೂ ಎರಡು ಟೆಸ್ಟ್​​ಗಳನ್ನು ಆಡಬೇಕಿದೆ. ಮೂರನೇ ಟೆಸ್ಟ್​ಗೂ ಮೊದಲು ರೋಹಿತ್​ ಶರ್ಮಾ ಸೇರಿ ಐದು ಟೀಂ ಇಂಡಿಯಾ ಆಟಗಾರರು ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಇದೆ. ಈ ಮಧ್ಯೆ, ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರುವುದೇ ಬೇಡ ಎನ್ನುವ ಸಂದೇಶವನ್ನು ಕ್ವೀನ್ಸ್​ಲೆಂಡ್​ ಸರ್ಕಾರ ರವಾನೆ ಮಾಡಿದೆ.

ಕೊನೆಯ ಟೆಸ್ಟ್​​ ಪಂದ್ಯ, ಕ್ವೀನ್ಸ್​ಲೆಂಡ್​​ನ ಬ್ರಿಸ್​ಬೇನ್​ನಲ್ಲಿ ನಡೆಯಲಿದೆ. ಆ ದೇಶದ ಕಠಿಣ ಕೊರೊನಾ ನಿಯಮದಿಂದ ಅಲ್ಲಿಗೆ ತೆರಳಲು ಟೀಂ ಇಂಡಿಯಾ ಹಿಂದೇಟು ಹಾಕುತ್ತಿದೆ. ಸಿಡ್ನಿಗೆ ಬರುವುದಕ್ಕೂ ಮೊದಲು ನಾವು ದುಬೈನಲ್ಲಿ 14 ದಿನ ಕ್ವಾರಂಟೈನ್​ ಆಗಿದ್ದವು. ಆಸ್ಟ್ರೇಲಿಯಾ ನೆಲದಲ್ಲಿ ಮತ್ತೆ 14 ದಿನ ಕ್ವಾರಂಟೈನ್​ ಆಗಿದ್ದೇವೆ. ಈಗ ಬ್ರಿಸ್​ಬೇನ್​ನಲ್ಲಿ ಪಂದ್ಯ ಆಡಬೇಕು ಎಂದರೆ ಮತ್ತೆ ಕ್ವಾರಂಟೈನ್​ ಆಗಬೇಕು ಎನ್ನುತ್ತಿದ್ದಾರೆ. ಕೊನೆಯ ಟೆಸ್ಟ್​​ ಆಸ್ಟ್ರೇಲಿಯಾ ನೆಲದಲ್ಲೇ ನಡೆಯಲಿ.  ಅದಕ್ಕೆ ನಮ್ಮ ಅಭ್ಯಂತರ ಏನು ಇಲ್ಲ. ಈಗ ಮತ್ತೆ ಕ್ವಾರಂಟೈನ್​ ಆಗುವುದು ಸುಲಭದ ಮಾತಲ್ಲ ಎಂದು ಟೀಂ ಇಂಡಿಯಾ ಅಭಿಪ್ರಾಯಪಟ್ಟಿತ್ತು.

ಇದಕ್ಕೆ, ಕ್ವೀನ್ಸ್​ಲೆಂಡ್​ನ ಆರೋಗ್ಯ ಸಚಿವೆ ರೋಸ್​ ಬೇಟ್ಸ್​ ತಿರುಗೇಟು ನೀಡಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಪಾಲಿಸುವುದಿಲ್ಲ ಎಂದಾದರೆ ಅವರು ಬರುವುದೇ ಬೇಡ. ನಿಯಮ ಎಂಬುದು ಎಲ್ಲರಿಗೂ ಅನ್ವಯವಾಗುತ್ತದೆ ಎಂದಿದ್ದಾರೆ.

India vs Australia Test Series | ಪೂಜಾರಾ ಸ್ಥಾನದಲ್ಲಿ ರೋಹಿತ್ ಶರ್ಮರನ್ನು ಉಪನಾಯಕನೆಂದು ಘೋಷಿಸಿದ ಬಿಸಿಸಿಐ

Published On - 2:54 pm, Sun, 3 January 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ