AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ. ಈ ಮಧ್ಯೆ ವಿದೇಶಿ ಸರ್ಕಾರವೊಂದು ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದೆ.

'ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ'- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ
ಟೀಂ ಇಂಡಿಯಾ ಆಟಗಾರರು
ರಾಜೇಶ್ ದುಗ್ಗುಮನೆ
| Edited By: |

Updated on:Jan 03, 2021 | 2:55 PM

Share

ಟೀಂ ಇಂಡಿಯಾ ಸದ್ಯ ಆಸ್ಟ್ರೇಲಿಯಾ ನೆಲದಲ್ಲಿದ್ದು, ಏಕದಿನ, ಟಿ-20 ಸರಣಿ ಪೂರ್ಣಗೊಳಿಸಿದೆ. ಸದ್ಯ, ಟೆಸ್ಟ್​ ಸರಣಿಯ ಎರಡು ಪಂದ್ಯಗಳನ್ನು ಆಡಿದ್ದು, ಇನ್ನೂ ಎರಡು ಟೆಸ್ಟ್​​ಗಳನ್ನು ಆಡಬೇಕಿದೆ. ಮೂರನೇ ಟೆಸ್ಟ್​ಗೂ ಮೊದಲು ರೋಹಿತ್​ ಶರ್ಮಾ ಸೇರಿ ಐದು ಟೀಂ ಇಂಡಿಯಾ ಆಟಗಾರರು ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಇದೆ. ಈ ಮಧ್ಯೆ, ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರುವುದೇ ಬೇಡ ಎನ್ನುವ ಸಂದೇಶವನ್ನು ಕ್ವೀನ್ಸ್​ಲೆಂಡ್​ ಸರ್ಕಾರ ರವಾನೆ ಮಾಡಿದೆ.

ಕೊನೆಯ ಟೆಸ್ಟ್​​ ಪಂದ್ಯ, ಕ್ವೀನ್ಸ್​ಲೆಂಡ್​​ನ ಬ್ರಿಸ್​ಬೇನ್​ನಲ್ಲಿ ನಡೆಯಲಿದೆ. ಆ ದೇಶದ ಕಠಿಣ ಕೊರೊನಾ ನಿಯಮದಿಂದ ಅಲ್ಲಿಗೆ ತೆರಳಲು ಟೀಂ ಇಂಡಿಯಾ ಹಿಂದೇಟು ಹಾಕುತ್ತಿದೆ. ಸಿಡ್ನಿಗೆ ಬರುವುದಕ್ಕೂ ಮೊದಲು ನಾವು ದುಬೈನಲ್ಲಿ 14 ದಿನ ಕ್ವಾರಂಟೈನ್​ ಆಗಿದ್ದವು. ಆಸ್ಟ್ರೇಲಿಯಾ ನೆಲದಲ್ಲಿ ಮತ್ತೆ 14 ದಿನ ಕ್ವಾರಂಟೈನ್​ ಆಗಿದ್ದೇವೆ. ಈಗ ಬ್ರಿಸ್​ಬೇನ್​ನಲ್ಲಿ ಪಂದ್ಯ ಆಡಬೇಕು ಎಂದರೆ ಮತ್ತೆ ಕ್ವಾರಂಟೈನ್​ ಆಗಬೇಕು ಎನ್ನುತ್ತಿದ್ದಾರೆ. ಕೊನೆಯ ಟೆಸ್ಟ್​​ ಆಸ್ಟ್ರೇಲಿಯಾ ನೆಲದಲ್ಲೇ ನಡೆಯಲಿ.  ಅದಕ್ಕೆ ನಮ್ಮ ಅಭ್ಯಂತರ ಏನು ಇಲ್ಲ. ಈಗ ಮತ್ತೆ ಕ್ವಾರಂಟೈನ್​ ಆಗುವುದು ಸುಲಭದ ಮಾತಲ್ಲ ಎಂದು ಟೀಂ ಇಂಡಿಯಾ ಅಭಿಪ್ರಾಯಪಟ್ಟಿತ್ತು.

ಇದಕ್ಕೆ, ಕ್ವೀನ್ಸ್​ಲೆಂಡ್​ನ ಆರೋಗ್ಯ ಸಚಿವೆ ರೋಸ್​ ಬೇಟ್ಸ್​ ತಿರುಗೇಟು ನೀಡಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಪಾಲಿಸುವುದಿಲ್ಲ ಎಂದಾದರೆ ಅವರು ಬರುವುದೇ ಬೇಡ. ನಿಯಮ ಎಂಬುದು ಎಲ್ಲರಿಗೂ ಅನ್ವಯವಾಗುತ್ತದೆ ಎಂದಿದ್ದಾರೆ.

India vs Australia Test Series | ಪೂಜಾರಾ ಸ್ಥಾನದಲ್ಲಿ ರೋಹಿತ್ ಶರ್ಮರನ್ನು ಉಪನಾಯಕನೆಂದು ಘೋಷಿಸಿದ ಬಿಸಿಸಿಐ

Published On - 2:54 pm, Sun, 3 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ