AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ. ಈ ಮಧ್ಯೆ ವಿದೇಶಿ ಸರ್ಕಾರವೊಂದು ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದೆ.

'ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ'- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ
ಟೀಂ ಇಂಡಿಯಾ ಆಟಗಾರರು
ರಾಜೇಶ್ ದುಗ್ಗುಮನೆ
| Edited By: |

Updated on:Jan 03, 2021 | 2:55 PM

Share

ಟೀಂ ಇಂಡಿಯಾ ಸದ್ಯ ಆಸ್ಟ್ರೇಲಿಯಾ ನೆಲದಲ್ಲಿದ್ದು, ಏಕದಿನ, ಟಿ-20 ಸರಣಿ ಪೂರ್ಣಗೊಳಿಸಿದೆ. ಸದ್ಯ, ಟೆಸ್ಟ್​ ಸರಣಿಯ ಎರಡು ಪಂದ್ಯಗಳನ್ನು ಆಡಿದ್ದು, ಇನ್ನೂ ಎರಡು ಟೆಸ್ಟ್​​ಗಳನ್ನು ಆಡಬೇಕಿದೆ. ಮೂರನೇ ಟೆಸ್ಟ್​ಗೂ ಮೊದಲು ರೋಹಿತ್​ ಶರ್ಮಾ ಸೇರಿ ಐದು ಟೀಂ ಇಂಡಿಯಾ ಆಟಗಾರರು ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಇದೆ. ಈ ಮಧ್ಯೆ, ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರುವುದೇ ಬೇಡ ಎನ್ನುವ ಸಂದೇಶವನ್ನು ಕ್ವೀನ್ಸ್​ಲೆಂಡ್​ ಸರ್ಕಾರ ರವಾನೆ ಮಾಡಿದೆ.

ಕೊನೆಯ ಟೆಸ್ಟ್​​ ಪಂದ್ಯ, ಕ್ವೀನ್ಸ್​ಲೆಂಡ್​​ನ ಬ್ರಿಸ್​ಬೇನ್​ನಲ್ಲಿ ನಡೆಯಲಿದೆ. ಆ ದೇಶದ ಕಠಿಣ ಕೊರೊನಾ ನಿಯಮದಿಂದ ಅಲ್ಲಿಗೆ ತೆರಳಲು ಟೀಂ ಇಂಡಿಯಾ ಹಿಂದೇಟು ಹಾಕುತ್ತಿದೆ. ಸಿಡ್ನಿಗೆ ಬರುವುದಕ್ಕೂ ಮೊದಲು ನಾವು ದುಬೈನಲ್ಲಿ 14 ದಿನ ಕ್ವಾರಂಟೈನ್​ ಆಗಿದ್ದವು. ಆಸ್ಟ್ರೇಲಿಯಾ ನೆಲದಲ್ಲಿ ಮತ್ತೆ 14 ದಿನ ಕ್ವಾರಂಟೈನ್​ ಆಗಿದ್ದೇವೆ. ಈಗ ಬ್ರಿಸ್​ಬೇನ್​ನಲ್ಲಿ ಪಂದ್ಯ ಆಡಬೇಕು ಎಂದರೆ ಮತ್ತೆ ಕ್ವಾರಂಟೈನ್​ ಆಗಬೇಕು ಎನ್ನುತ್ತಿದ್ದಾರೆ. ಕೊನೆಯ ಟೆಸ್ಟ್​​ ಆಸ್ಟ್ರೇಲಿಯಾ ನೆಲದಲ್ಲೇ ನಡೆಯಲಿ.  ಅದಕ್ಕೆ ನಮ್ಮ ಅಭ್ಯಂತರ ಏನು ಇಲ್ಲ. ಈಗ ಮತ್ತೆ ಕ್ವಾರಂಟೈನ್​ ಆಗುವುದು ಸುಲಭದ ಮಾತಲ್ಲ ಎಂದು ಟೀಂ ಇಂಡಿಯಾ ಅಭಿಪ್ರಾಯಪಟ್ಟಿತ್ತು.

ಇದಕ್ಕೆ, ಕ್ವೀನ್ಸ್​ಲೆಂಡ್​ನ ಆರೋಗ್ಯ ಸಚಿವೆ ರೋಸ್​ ಬೇಟ್ಸ್​ ತಿರುಗೇಟು ನೀಡಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಪಾಲಿಸುವುದಿಲ್ಲ ಎಂದಾದರೆ ಅವರು ಬರುವುದೇ ಬೇಡ. ನಿಯಮ ಎಂಬುದು ಎಲ್ಲರಿಗೂ ಅನ್ವಯವಾಗುತ್ತದೆ ಎಂದಿದ್ದಾರೆ.

India vs Australia Test Series | ಪೂಜಾರಾ ಸ್ಥಾನದಲ್ಲಿ ರೋಹಿತ್ ಶರ್ಮರನ್ನು ಉಪನಾಯಕನೆಂದು ಘೋಷಿಸಿದ ಬಿಸಿಸಿಐ

Published On - 2:54 pm, Sun, 3 January 21

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ