AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ’- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ

ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಕೂಡ ನಡೆಯುತ್ತಿದೆ. ಈ ಮಧ್ಯೆ ವಿದೇಶಿ ಸರ್ಕಾರವೊಂದು ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದೆ.

'ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರೋದೇ ಬೇಡ'- ಟೀಂ ಇಂಡಿಯಾಗೆ ಆಸ್ಟ್ರೇಲಿಯಾ ಎಚ್ಚರಿಕೆ
ಟೀಂ ಇಂಡಿಯಾ ಆಟಗಾರರು
ರಾಜೇಶ್ ದುಗ್ಗುಮನೆ
| Edited By: |

Updated on:Jan 03, 2021 | 2:55 PM

Share

ಟೀಂ ಇಂಡಿಯಾ ಸದ್ಯ ಆಸ್ಟ್ರೇಲಿಯಾ ನೆಲದಲ್ಲಿದ್ದು, ಏಕದಿನ, ಟಿ-20 ಸರಣಿ ಪೂರ್ಣಗೊಳಿಸಿದೆ. ಸದ್ಯ, ಟೆಸ್ಟ್​ ಸರಣಿಯ ಎರಡು ಪಂದ್ಯಗಳನ್ನು ಆಡಿದ್ದು, ಇನ್ನೂ ಎರಡು ಟೆಸ್ಟ್​​ಗಳನ್ನು ಆಡಬೇಕಿದೆ. ಮೂರನೇ ಟೆಸ್ಟ್​ಗೂ ಮೊದಲು ರೋಹಿತ್​ ಶರ್ಮಾ ಸೇರಿ ಐದು ಟೀಂ ಇಂಡಿಯಾ ಆಟಗಾರರು ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಇದೆ. ಈ ಮಧ್ಯೆ, ಕೊರೊನಾ ನಿಯಮ ಪಾಲಿಸಲಾಗದಿದ್ದರೆ ನೀವು ಬರುವುದೇ ಬೇಡ ಎನ್ನುವ ಸಂದೇಶವನ್ನು ಕ್ವೀನ್ಸ್​ಲೆಂಡ್​ ಸರ್ಕಾರ ರವಾನೆ ಮಾಡಿದೆ.

ಕೊನೆಯ ಟೆಸ್ಟ್​​ ಪಂದ್ಯ, ಕ್ವೀನ್ಸ್​ಲೆಂಡ್​​ನ ಬ್ರಿಸ್​ಬೇನ್​ನಲ್ಲಿ ನಡೆಯಲಿದೆ. ಆ ದೇಶದ ಕಠಿಣ ಕೊರೊನಾ ನಿಯಮದಿಂದ ಅಲ್ಲಿಗೆ ತೆರಳಲು ಟೀಂ ಇಂಡಿಯಾ ಹಿಂದೇಟು ಹಾಕುತ್ತಿದೆ. ಸಿಡ್ನಿಗೆ ಬರುವುದಕ್ಕೂ ಮೊದಲು ನಾವು ದುಬೈನಲ್ಲಿ 14 ದಿನ ಕ್ವಾರಂಟೈನ್​ ಆಗಿದ್ದವು. ಆಸ್ಟ್ರೇಲಿಯಾ ನೆಲದಲ್ಲಿ ಮತ್ತೆ 14 ದಿನ ಕ್ವಾರಂಟೈನ್​ ಆಗಿದ್ದೇವೆ. ಈಗ ಬ್ರಿಸ್​ಬೇನ್​ನಲ್ಲಿ ಪಂದ್ಯ ಆಡಬೇಕು ಎಂದರೆ ಮತ್ತೆ ಕ್ವಾರಂಟೈನ್​ ಆಗಬೇಕು ಎನ್ನುತ್ತಿದ್ದಾರೆ. ಕೊನೆಯ ಟೆಸ್ಟ್​​ ಆಸ್ಟ್ರೇಲಿಯಾ ನೆಲದಲ್ಲೇ ನಡೆಯಲಿ.  ಅದಕ್ಕೆ ನಮ್ಮ ಅಭ್ಯಂತರ ಏನು ಇಲ್ಲ. ಈಗ ಮತ್ತೆ ಕ್ವಾರಂಟೈನ್​ ಆಗುವುದು ಸುಲಭದ ಮಾತಲ್ಲ ಎಂದು ಟೀಂ ಇಂಡಿಯಾ ಅಭಿಪ್ರಾಯಪಟ್ಟಿತ್ತು.

ಇದಕ್ಕೆ, ಕ್ವೀನ್ಸ್​ಲೆಂಡ್​ನ ಆರೋಗ್ಯ ಸಚಿವೆ ರೋಸ್​ ಬೇಟ್ಸ್​ ತಿರುಗೇಟು ನೀಡಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೊರೊನಾ ನಿಯಮ ಪಾಲಿಸುವುದಿಲ್ಲ ಎಂದಾದರೆ ಅವರು ಬರುವುದೇ ಬೇಡ. ನಿಯಮ ಎಂಬುದು ಎಲ್ಲರಿಗೂ ಅನ್ವಯವಾಗುತ್ತದೆ ಎಂದಿದ್ದಾರೆ.

India vs Australia Test Series | ಪೂಜಾರಾ ಸ್ಥಾನದಲ್ಲಿ ರೋಹಿತ್ ಶರ್ಮರನ್ನು ಉಪನಾಯಕನೆಂದು ಘೋಷಿಸಿದ ಬಿಸಿಸಿಐ

Published On - 2:54 pm, Sun, 3 January 21

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು