AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಹೆಡ್​ ಕಾನ್ಸ್​ಟೇಬಲ್​ ಸಾವು: ವೈದ್ಯರು, ಸಿಬ್ಬಂದಿಯಿಂದ ಪ್ರತಿಭಟನೆ

ಕೊಪ್ಪಳ: ಒಂದು ಕಡೆ ವೈದ್ಯರ ವಿರುದ್ಧ ಆಕ್ರೋಶ.. ಮತ್ತೊಂದು ಕಡೆ ಪೊಲೀಸರ ವಿರುದ್ಧ ವೈದ್ಯರ ಧಿಕ್ಕಾರ. ನಡುವೆ ಹಲ್ಲೆಗೊಳಗಾದ ವೈದ್ಯನ ಆಕ್ರಂದನ. ನಿನ್ನೆ ರಾತ್ರಿ ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣ ಅಕ್ಷರಶಃ ರಣಾಂಗಣವಾಗಿತ್ತು. ಇದಕ್ಕೆಲ್ಲಾ ಕಾರಣವಾಗಿದ್ದು ಹೆಡ್ ಕಾನ್ಸ್‌ಟೇಬಲ್ ಒಬ್ಬರ ಸಾವು. ಕಳೆದೊಂದು ವಾರದ ಹಿಂದೆ ಕೊಪ್ಪಳ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಮಣ್ಣ ಎಂಬೋರು, ಕೊರೊನಾ ಸೋಂಕಿನಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಆದ್ರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ರು. ಈ ವಿಷ್ಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿ […]

ಕೊರೊನಾದಿಂದ ಹೆಡ್​ ಕಾನ್ಸ್​ಟೇಬಲ್​ ಸಾವು: ವೈದ್ಯರು, ಸಿಬ್ಬಂದಿಯಿಂದ ಪ್ರತಿಭಟನೆ
ಆಯೇಷಾ ಬಾನು
|

Updated on:Sep 03, 2020 | 8:44 AM

Share

ಕೊಪ್ಪಳ: ಒಂದು ಕಡೆ ವೈದ್ಯರ ವಿರುದ್ಧ ಆಕ್ರೋಶ.. ಮತ್ತೊಂದು ಕಡೆ ಪೊಲೀಸರ ವಿರುದ್ಧ ವೈದ್ಯರ ಧಿಕ್ಕಾರ. ನಡುವೆ ಹಲ್ಲೆಗೊಳಗಾದ ವೈದ್ಯನ ಆಕ್ರಂದನ. ನಿನ್ನೆ ರಾತ್ರಿ ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣ ಅಕ್ಷರಶಃ ರಣಾಂಗಣವಾಗಿತ್ತು. ಇದಕ್ಕೆಲ್ಲಾ ಕಾರಣವಾಗಿದ್ದು ಹೆಡ್ ಕಾನ್ಸ್‌ಟೇಬಲ್ ಒಬ್ಬರ ಸಾವು.

ಕಳೆದೊಂದು ವಾರದ ಹಿಂದೆ ಕೊಪ್ಪಳ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಮಣ್ಣ ಎಂಬೋರು, ಕೊರೊನಾ ಸೋಂಕಿನಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಆದ್ರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ರು. ಈ ವಿಷ್ಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿ ಬಂದ ಕಾನ್ಸ್‌ಟೇಬಲ್ ಕುಟುಂಬಸ್ಥರು, ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಪೇಷೆಂಟ್ ಸ್ಥಿತಿ ಸೀರಿಯಸ್ ಆಗಿದ್ರೂ ಮನೆಯವರಿಗೆ ತಿಳಿಸಿಲ್ಲ ಎಂದು ಗರಂ ಆಗಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ವಿಷ್ಯ ತಿಳಿಯುತ್ತಿದ್ದಂತೆ ಕೊಪ್ಪಳ ಜಿಲ್ಲಾಸ್ಪತ್ರೆ ವೈದ್ಯರು, ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ್ರು. ಸ್ಥಳಕ್ಕೆ ಡಿಸಿ ಬರಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಮಾತನಾಡಿದ ವೈದ್ಯ ವೀರೇಶ್, ನಮ್ಮದೇನು ತಪ್ಪಿಲ್ಲ. ರೋಗಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಕುಟುಂಬಸ್ಥರ ಸಂಪರ್ಕಕ್ಕೆ ಪ್ರಯತ್ನಿಸಿದ್ವಿ. ಆದ್ರೆ ಅವರು ನೀಡಿದ್ದ ಮೊಬೈಲ್ ನಂಬರ್ ಸ್ವಿಚ್ ಆಫ್ ಆಗಿತ್ತು. ಈ ಸಂಬಂಧ ನಮ್ಮ ಬಳಿ ದಾಖಲೆಗಳಿವೆ ಅಂದ್ರು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಕೊಪ್ಪಳ ಜಿಲ್ಲಾಧಿಕಾರಿ ಹಾಗೂ ಕಿಮ್ಸ್ ನಿರ್ದೇಶಕ ವಿಜಯನಾಥ್ ಇಟಗಿ ದೌಡಾಯಿಸಿ ಬಂದ್ರು. ಪರಿಸ್ಥಿತಿಯನ್ನು ಹತೋಟಿಗೆ ತಂದ್ರು. ವೈದ್ಯರು ಮತ್ತೆ ಕರ್ತವ್ಯಕ್ಕೆ ಮರಳುವಂತೆ ಮನವೊಲಿಸಿದ್ರು. ಒಟ್ನಲ್ಲಿ, ಕಾನ್ಸ್‌ಟೇಬಲ್‌ ಸಾವಿನ ವಿಚಾರದಲ್ಲಿ ಪೊಲೀಸರು ಮತ್ತು ವೈದ್ಯರು ಕಿತ್ತಾಟ ಮಾತ್ರ ಜನರಲ್ಲಿ ಚಿಂತೆ ಉಂಟುಮಾಡಿತ್ತು.

Published On - 8:38 am, Thu, 3 September 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ