ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಹೋಟೆಲ್​ನಲ್ಲಿ ಕ್ವಾರಂಟೈನ್​ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ. ವಾಪಸ್ ಕ್ವಾರಂಟೈನ್ ಹೋಟೆಲ್​ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ […]

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಿ ನರಳಿ ಮೃತಪಟ್ಟ ಕೊರೊನಾ ಸೋಂಕಿತ
ಸಾಧು ಶ್ರೀನಾಥ್​ Edited By:

Updated on: Jun 25, 2020 | 11:34 AM

ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ನರಳಿ ನರಳಿ ನರಳಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಹೋಟೆಲ್​ನಲ್ಲಿ ಕ್ವಾರಂಟೈನ್​ ಇದ್ದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತನನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯನ್ನು ಅಡ್ಮಿಟ್ ಮಾಡಿಕೊಂಡಿಲ್ಲ.

ವಾಪಸ್ ಕ್ವಾರಂಟೈನ್ ಹೋಟೆಲ್​ಗೆ ಹೊದ್ರೆ ಸೋಂಕಿತನೆಂದು ಅಲ್ಲಿಯೂ ಆತನನ್ನು ಸೇರಿಸಿಕೊಂಡಿಲ್ಲ. ಮರುದಿನ ಎಲ್ಲಾ ಆಸ್ಪತ್ರೆಗಳಿಗೆ ಅಡ್ಡಾಡಿದ್ರೂ ಯಾರು ದಾಖಲು ಮಾಡಿಕೊಂಡಿಲ್ಲ. ಹೀಗಾಗಿ ಚಿಕಿತ್ಸೆ ಇಲ್ಲದೆ ವ್ಯಕ್ತಿ ನರಳಿ ನರಳಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ಕಲಾಸಿಪಾಳ್ಯದ ಪೊಲೀಸ್ ಠಾಣೆಯ ಮುಂದೆ ಮೃತ ಸೋಂಕಿತನ ಮನೆಯಿದೆ. ಮಧ್ಯರಾತ್ರಿ ಸುಮಾರು 2 ಗಂಟೆಗೆ ಆ್ಯಂಬುಲೆನ್ಸ್​ನಲ್ಲಿ ಬಂದು ಮೃತದೇಹ ತೆಗೆದುಕೊಂಡು ಹೋಗಿದ್ದಾರೆ.

Published On - 11:31 am, Thu, 25 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us