AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ […]

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 04, 2020 | 5:32 PM

Share

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ ಎಂದು ವೈದ್ಯಾಧಿಕಾರಿಯ ಆರೋಪಿಸಿದ್ದಾರೆ.

ಈ ಹಿಂದೆ, ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಕಳಿಸಿದರೆ, ಕೇವಲ 2,000 ರೂಪಾಯಿ ಪಡೆದು ಪ್ರಯಾಣಿಕರನ್ನ ಮನೆಗೆ ಕಳಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯು ಹೇಳಿದ್ದಾರೆ. ಈ ರೀತಿಯ ಹಲವು ಘಟನೆಗಳಿಂದ ಬೇಸತ್ತ ವೈದ್ಯಾಧಿಕಾರಿ ಇದೀಗ ಈ ಅವ್ಯವಹಾರವನ್ನ ಬಯಲಿಗೆಳೆಯಲು ಮುಂದಾಗಿದ್ದು  ಪೊಲೀಸ್ ಠಾಣೆಯ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಅವ್ಯವಹಾರದ ಆಡಿಯೋ ತುಣುಕೊಂದು ಬಹಿರಂಗವಾಗಿದ್ದು, ಅದರಲ್ಲಿ ಪ್ಯಾಸೆಂಜರ್​ನಿಂದ ಹಣ ಪಡೆದ ನರ್ಸ್ ಒಬ್ಬರು ಯಾವುದೇ ಕಾರಣಕ್ಕೂ ಹಣಪಡೆದಿರುವ ವಿಚಾರವನ್ನು ಯಾರ ಬಳಿಯೂ ಹೇಳಬೇಡಿ ಎಂದು ನುಡಿದಿರುವುದು ಕೇಳಿಬಂದಿದೆ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ