AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ […]

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 5:32 PM

Share

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ ಎಂದು ವೈದ್ಯಾಧಿಕಾರಿಯ ಆರೋಪಿಸಿದ್ದಾರೆ.

ಈ ಹಿಂದೆ, ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಕಳಿಸಿದರೆ, ಕೇವಲ 2,000 ರೂಪಾಯಿ ಪಡೆದು ಪ್ರಯಾಣಿಕರನ್ನ ಮನೆಗೆ ಕಳಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯು ಹೇಳಿದ್ದಾರೆ. ಈ ರೀತಿಯ ಹಲವು ಘಟನೆಗಳಿಂದ ಬೇಸತ್ತ ವೈದ್ಯಾಧಿಕಾರಿ ಇದೀಗ ಈ ಅವ್ಯವಹಾರವನ್ನ ಬಯಲಿಗೆಳೆಯಲು ಮುಂದಾಗಿದ್ದು  ಪೊಲೀಸ್ ಠಾಣೆಯ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಅವ್ಯವಹಾರದ ಆಡಿಯೋ ತುಣುಕೊಂದು ಬಹಿರಂಗವಾಗಿದ್ದು, ಅದರಲ್ಲಿ ಪ್ಯಾಸೆಂಜರ್​ನಿಂದ ಹಣ ಪಡೆದ ನರ್ಸ್ ಒಬ್ಬರು ಯಾವುದೇ ಕಾರಣಕ್ಕೂ ಹಣಪಡೆದಿರುವ ವಿಚಾರವನ್ನು ಯಾರ ಬಳಿಯೂ ಹೇಳಬೇಡಿ ಎಂದು ನುಡಿದಿರುವುದು ಕೇಳಿಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!