AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ […]

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 04, 2020 | 5:32 PM

Share

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ ಎಂದು ವೈದ್ಯಾಧಿಕಾರಿಯ ಆರೋಪಿಸಿದ್ದಾರೆ.

ಈ ಹಿಂದೆ, ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಕಳಿಸಿದರೆ, ಕೇವಲ 2,000 ರೂಪಾಯಿ ಪಡೆದು ಪ್ರಯಾಣಿಕರನ್ನ ಮನೆಗೆ ಕಳಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯು ಹೇಳಿದ್ದಾರೆ. ಈ ರೀತಿಯ ಹಲವು ಘಟನೆಗಳಿಂದ ಬೇಸತ್ತ ವೈದ್ಯಾಧಿಕಾರಿ ಇದೀಗ ಈ ಅವ್ಯವಹಾರವನ್ನ ಬಯಲಿಗೆಳೆಯಲು ಮುಂದಾಗಿದ್ದು  ಪೊಲೀಸ್ ಠಾಣೆಯ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಅವ್ಯವಹಾರದ ಆಡಿಯೋ ತುಣುಕೊಂದು ಬಹಿರಂಗವಾಗಿದ್ದು, ಅದರಲ್ಲಿ ಪ್ಯಾಸೆಂಜರ್​ನಿಂದ ಹಣ ಪಡೆದ ನರ್ಸ್ ಒಬ್ಬರು ಯಾವುದೇ ಕಾರಣಕ್ಕೂ ಹಣಪಡೆದಿರುವ ವಿಚಾರವನ್ನು ಯಾರ ಬಳಿಯೂ ಹೇಳಬೇಡಿ ಎಂದು ನುಡಿದಿರುವುದು ಕೇಳಿಬಂದಿದೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ