AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ […]

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 5:32 PM

Share

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ ಎಂದು ವೈದ್ಯಾಧಿಕಾರಿಯ ಆರೋಪಿಸಿದ್ದಾರೆ.

ಈ ಹಿಂದೆ, ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಕಳಿಸಿದರೆ, ಕೇವಲ 2,000 ರೂಪಾಯಿ ಪಡೆದು ಪ್ರಯಾಣಿಕರನ್ನ ಮನೆಗೆ ಕಳಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯು ಹೇಳಿದ್ದಾರೆ. ಈ ರೀತಿಯ ಹಲವು ಘಟನೆಗಳಿಂದ ಬೇಸತ್ತ ವೈದ್ಯಾಧಿಕಾರಿ ಇದೀಗ ಈ ಅವ್ಯವಹಾರವನ್ನ ಬಯಲಿಗೆಳೆಯಲು ಮುಂದಾಗಿದ್ದು  ಪೊಲೀಸ್ ಠಾಣೆಯ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಅವ್ಯವಹಾರದ ಆಡಿಯೋ ತುಣುಕೊಂದು ಬಹಿರಂಗವಾಗಿದ್ದು, ಅದರಲ್ಲಿ ಪ್ಯಾಸೆಂಜರ್​ನಿಂದ ಹಣ ಪಡೆದ ನರ್ಸ್ ಒಬ್ಬರು ಯಾವುದೇ ಕಾರಣಕ್ಕೂ ಹಣಪಡೆದಿರುವ ವಿಚಾರವನ್ನು ಯಾರ ಬಳಿಯೂ ಹೇಳಬೇಡಿ ಎಂದು ನುಡಿದಿರುವುದು ಕೇಳಿಬಂದಿದೆ.

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!