AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ […]

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 5:32 PM

Share

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ ಎಂದು ವೈದ್ಯಾಧಿಕಾರಿಯ ಆರೋಪಿಸಿದ್ದಾರೆ.

ಈ ಹಿಂದೆ, ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಕಳಿಸಿದರೆ, ಕೇವಲ 2,000 ರೂಪಾಯಿ ಪಡೆದು ಪ್ರಯಾಣಿಕರನ್ನ ಮನೆಗೆ ಕಳಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯು ಹೇಳಿದ್ದಾರೆ. ಈ ರೀತಿಯ ಹಲವು ಘಟನೆಗಳಿಂದ ಬೇಸತ್ತ ವೈದ್ಯಾಧಿಕಾರಿ ಇದೀಗ ಈ ಅವ್ಯವಹಾರವನ್ನ ಬಯಲಿಗೆಳೆಯಲು ಮುಂದಾಗಿದ್ದು  ಪೊಲೀಸ್ ಠಾಣೆಯ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಅವ್ಯವಹಾರದ ಆಡಿಯೋ ತುಣುಕೊಂದು ಬಹಿರಂಗವಾಗಿದ್ದು, ಅದರಲ್ಲಿ ಪ್ಯಾಸೆಂಜರ್​ನಿಂದ ಹಣ ಪಡೆದ ನರ್ಸ್ ಒಬ್ಬರು ಯಾವುದೇ ಕಾರಣಕ್ಕೂ ಹಣಪಡೆದಿರುವ ವಿಚಾರವನ್ನು ಯಾರ ಬಳಿಯೂ ಹೇಳಬೇಡಿ ಎಂದು ನುಡಿದಿರುವುದು ಕೇಳಿಬಂದಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ