5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ […]

5,000 ರೂ. ಕೊಟ್ಟರೆ No ಸಾಂಸ್ಥಿಕ ಕ್ವಾರಂಟೈನ್​.. ಅವ್ಯವಹಾರ ಕಂಡು ಬೇಸತ್ತ ವೈದ್ಯಾಧಿಕಾರಿ
ಸಾಧು ಶ್ರೀನಾಥ್​ Edited By:

Updated on: Aug 04, 2020 | 5:32 PM

ಬೆಂಗಳೂರು:ಕ್ವಾರಂಟೈನ್ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರದಿಂದ ಬೇಸತ್ತ ವೈದ್ಯಾಧಿಕಾರಿಯೊಬ್ಬರು ಈ ದಂಧೆಗೆ ಕಡಿವಾಣ ಹಾಕಲು ಠಾಣೆಯ ಮೆಟ್ಟಿಲೇರಲು ಸಿದ್ಧರಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದೇಶದಿಂದ ಬಂದವರಿಗೆ ವೈದ್ಯರು 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್​ಗೆ ಸೂಚಿಸಿದ್ದಾರೆ. ಆದರೆ ಕ್ವಾರಂಟೈನ್​ ಕೇಂದ್ರದ ಬಿಬಿಎಂಪಿ ಸಿಬ್ಬಂದಿ ಹಾಗೂ ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಿಸದೆ  ಹಾಗೆ ಬಿಟ್ಟು ಕಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಈ ಅವ್ಯವಹಾರಕ್ಕೆ 5 ರಿಂದ 10 ಸಾವಿರ ರೂಪಾಯಿ ವಸೂಲಿ ಸಹ ಮಾಡುತ್ತಿದ್ದಾರೆ ಎಂದು ವೈದ್ಯಾಧಿಕಾರಿಯ ಆರೋಪಿಸಿದ್ದಾರೆ.

ಈ ಹಿಂದೆ, ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್​ಗೆ ಕಳಿಸಿದರೆ, ಕೇವಲ 2,000 ರೂಪಾಯಿ ಪಡೆದು ಪ್ರಯಾಣಿಕರನ್ನ ಮನೆಗೆ ಕಳಿಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಯು ಹೇಳಿದ್ದಾರೆ. ಈ ರೀತಿಯ ಹಲವು ಘಟನೆಗಳಿಂದ ಬೇಸತ್ತ ವೈದ್ಯಾಧಿಕಾರಿ ಇದೀಗ ಈ ಅವ್ಯವಹಾರವನ್ನ ಬಯಲಿಗೆಳೆಯಲು ಮುಂದಾಗಿದ್ದು  ಪೊಲೀಸ್ ಠಾಣೆಯ ಮೆಟ್ಟಿಲೇರಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಜೊತೆಗೆ, ಈ ಅವ್ಯವಹಾರದ ಆಡಿಯೋ ತುಣುಕೊಂದು ಬಹಿರಂಗವಾಗಿದ್ದು, ಅದರಲ್ಲಿ ಪ್ಯಾಸೆಂಜರ್​ನಿಂದ ಹಣ ಪಡೆದ ನರ್ಸ್ ಒಬ್ಬರು ಯಾವುದೇ ಕಾರಣಕ್ಕೂ ಹಣಪಡೆದಿರುವ ವಿಚಾರವನ್ನು ಯಾರ ಬಳಿಯೂ ಹೇಳಬೇಡಿ ಎಂದು ನುಡಿದಿರುವುದು ಕೇಳಿಬಂದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us