AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ -ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಳಿಯ!

ಬಾಗಲಕೋಟೆ:ಅತ್ತೆ ಮನೆಯವರು ಆಸ್ತಿ ಮತ್ತು ವರದಕ್ಷಿಣೆ ನೀಡಿಲ್ಲವೆಂದು ಜಗಳ ತೆಗೆದ ಪತಿ ಮಹಾಶಯ ತನ್ನ ಹೆಂಡತಿ ಹಾಗೂ ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.   ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮದ ರಂಜಿತಾ(22) ಹಾಗೂ ರೇಣವ್ವ(50) ಮೃತ ದುರ್ದೈವಿಗಳು. ವರ್ಷದ ಹಿಂದೆ ಮೃತ ರಂಜಿತಾಗೆ, ವಿಠ್ಠಲ ಎಂಬ ಯುವಕನೊಂದಿಗೆ ಮದುವೆಯಾಗಿತ್ತು. ಆದರೆ ಆಸ್ತಿ ವಿಚಾರವಾಗಿ ಪದೇಪದೇ ರಂಜಿತಾಳ ಜೊತೆ ವಿಠ್ಠಲ ಜಗಳ ತೆಗೆಯುತ್ತಿದ್ದ, ಇದರಿಂದ ರೋಸಿ ಹೋಗಿದ್ದ ರಂಜಿತ […]

ಪತ್ನಿ -ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಳಿಯ!
ಸಾಧು ಶ್ರೀನಾಥ್​
|

Updated on: Aug 10, 2020 | 10:48 AM

Share

ಬಾಗಲಕೋಟೆ:ಅತ್ತೆ ಮನೆಯವರು ಆಸ್ತಿ ಮತ್ತು ವರದಕ್ಷಿಣೆ ನೀಡಿಲ್ಲವೆಂದು ಜಗಳ ತೆಗೆದ ಪತಿ ಮಹಾಶಯ ತನ್ನ ಹೆಂಡತಿ ಹಾಗೂ ಅತ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮದ ರಂಜಿತಾ(22) ಹಾಗೂ ರೇಣವ್ವ(50) ಮೃತ ದುರ್ದೈವಿಗಳು. ವರ್ಷದ ಹಿಂದೆ ಮೃತ ರಂಜಿತಾಗೆ, ವಿಠ್ಠಲ ಎಂಬ ಯುವಕನೊಂದಿಗೆ ಮದುವೆಯಾಗಿತ್ತು. ಆದರೆ ಆಸ್ತಿ ವಿಚಾರವಾಗಿ ಪದೇಪದೇ ರಂಜಿತಾಳ ಜೊತೆ ವಿಠ್ಠಲ ಜಗಳ ತೆಗೆಯುತ್ತಿದ್ದ, ಇದರಿಂದ ರೋಸಿ ಹೋಗಿದ್ದ ರಂಜಿತ ವಾರದ ಹಿಂದೆ ಜಗಳವಾಡಿಕೊಂಡು ತವರಿಗೆ ವಾಪಾಸಾಗಿದ್ದಳು.

ಆದರೆ 2 ದಿನಗಳ ಹಿಂದೆ ತಾಯಿ ಜೊತೆ ಗಂಡನ ಮನೆಗೆ ವಾಪಸಾಗಿದ್ದ ರಂಜಿತಾ ಜೊತೆ, ಪತಿ ವಿಠ್ಠಲ ಪುನಃ ಜಗಳ ತೆಗೆದಿದ್ದಾನೆ. ವಿಕೋಪಕ್ಕೆ ತಿರುಗಿದ ಜಗಳದಲ್ಲಿ ವಿಠ್ಠಲ ಕೊಡಲಿಯಿಂದ ಕೊಚ್ಚಿ, ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಾನೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸದ್ಯ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?