AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ಅಂದ್ರೆ ನಿನ್ನೆ ರಾಮನಗರ ಮೂಲದ ಪ್ರತಾಪ್ ಏರ್ಪೋಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು.

ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು
ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 31, 2021 | 8:56 AM

Share

ದೇವನಹಳ್ಳಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮುಂಜಾನೆ ಮೃತಪಟ್ಟಿದ್ದಾರೆ. ಪ್ರತಾಪ್ ಆತ್ಮಹತ್ಯೆ ಮಾಡಿಕೊಂಡ ಚಾಲಕ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ಅಂದ್ರೆ ನಿನ್ನೆ ರಾಮನಗರ ಮೂಲದ ಪ್ರತಾಪ್ ಏರ್ಪೋಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು. ಆಗ ಭದ್ರತಾಪಡೆ ಕ್ಯಾಬ್ ಗಾಜು ಒಡೆದು ಗಂಭೀರ ಗಾಯಗೊಂಡಿದ್ದ ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಪ್ರತಾಪ್ ಮೃತಪಟ್ಟಿದ್ದಾರೆ.

ಚಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಏರ್ಪೋಟ್ ಟ್ಯಾಕ್ಸಿಗಳನ್ನ ನಿಲ್ಲಿಸಿ ಧರಣಿ ನಡೆಸಲು ಇತರೆ ಚಾಲಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಇಂದೂ ಸಹ ಏರ್ಪೋಟ್ ಪ್ರಯಾಣಿಕರಿಗೆ ಟ್ಯಾಕ್ಸಿ ಬಿಸಿ ತಟ್ಟಲಿದೆ. ನೆನ್ನೆ ಸಂಜೆಯಿಂದ ಒಲಾ ಉಬರ್ ಮತ್ತು ಏರ್ಪೋಟ್ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದಾರೆ.

ಚಾಲಕನ ಆತ್ಮಹತ್ಯೆಗೆ ಕಾರಣ ಕೊರೊನಾ ನಂತರ ಬಾಡಿಗೆ ಕಡಿಮೆಯಾಗಿದ್ದ ಕಾರಣ ಪ್ರತಾಪ್ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ. ಸಂಸಾರ ನಿರ್ವಹಣೆ ಮತ್ತು ವಾಹನದ ಕಂತು ಕಟ್ಟುವ ಹೊರೆಯಿಂದ ಬೇಸರಗೊಂಡಿದ್ದ ಹೀಗಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂದು ಕೆಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದೆಹಲಿಯ ಬಿಜೆಪಿ ನಾಯಕ ಜಿ.ಎಸ್. ಬಾವಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್