ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ. ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ […]

ಈ ಕುಡುಕ ಟೈಟ್ ಆದ ಬಾಡಿನ ಹಾಲ್ಟ್ ಮಾಡಿದ್ದೆಲ್ಲಿ ಗೊತ್ತಾ?
ಸಾಧು ಶ್ರೀನಾಥ್​

Updated on: May 05, 2020 | 1:17 PM

ಬೆಂಗಳೂರು: ಎಣ್ಣೆ ಅಂಗಡಿ ಓಪನ್ ಆಗಿದ್ದೇ ತಡ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಕಂಠಪೂರ್ತಿ ಎಣ್ಣೆ ಬಿಡ್ಕೊಂಡು, ಬಾಡಿ ಬ್ಯಾಲೆನ್ಸ್ ಮಾಡ್ಕೊಂಡು ತೆಲಾಡಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಹೋಗಲಾಗದೆ ರಸ್ತೆಗಳಲ್ಲೇ ಮಲಗಿದ್ದಾರೆ. ಆದರೆ ಇಲ್ಲೊಬ್ಬ ಭೂಪ ಎಣ್ಣೆ ಕುಡಿದು ಫುಲ್ ಟೈಟ್ ಆಗಿ ವಿದ್ಯುತ್ ಕಂಬದ ಮೇಲೆ ಮಲಗಿದ್ದಾನೆ. ದೊಡ್ಡಬಳ್ಳಾಪುರ ನಗರದ ಮೂತ್ತೂರು ರೈಲ್ವೆ ಹಳಿ ಪಕ್ಕದ ಕಂಬವನ್ನು ಹತ್ತಿ ತೆಲಾಡಿದ್ದಾನೆ.

ಅದೃಷ್ಟವಶಾತ್ ಕಂಬಕ್ಕೆ ವಿದ್ಯುತ್ ಸಂಪರ್ಕ ನೀಡಿರದ ಕಾರಣ ಭಾರಿ ಅನಾಹುತ ತಪ್ಪಿದೆ. ಗೌರಿಬಿದನೂರು ಮೂಲದ ಈ ಕುಡುಕನ ಹುಚ್ಚಾಟ ನೋಡಿದ ಜನ ಭಯಭೀತರಾಗಿದ್ದರು. ಕೂಡಲೇ ಸ್ಥಳೀಯರು ಕಂಬವೇರಿದ್ದ ಕುಡುಕನನ್ನ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 11:32 am, Tue, 5 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us