ನಶೆಯೇರಿ.. ಸೂರ್ಯಸಿಟಿಯಲ್ಲಿ ರಸ್ತೆ ಮಧ್ಯೆ ವಾಹನಕ್ಕೆ ಬೆಂಕಿ ಕಡ್ಡಿಗೀರಿದ!

ಆನೇಕಲ್: ಮದ್ಯದ ಅಮಲಿನಲ್ಲಿ ದ್ವಿಚಕ್ರ ವಾಹನಕ್ಕೆ ಬೆಂಕಿಯಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಸೂರ್ಯಸಿಟಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದಾಗಿನಿಂದ ಕುಡುಕರ ಅನೇಕ ಅವಾಂತರಗಳು ರಾಜ್ಯದಲ್ಲಿ ನಡೆಯುತ್ತಿವೆ. ಅದೇ ರೀತಿ ಇಲ್ಲೊಬ್ಬ ಕುಡುಕ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಬೈಕ್​ಗೆ ಬೆಂಕಿಯಿಟ್ಟಿದ್ದಾನೆ. ನೂರಾರು ವಾಹನಗಳು ಸಂಚರಿಸುತ್ತಿದ್ದರು ಗಮನಿಸದೆ ಸೂರ್ಯನಗರದ ಮುಖ್ಯ ರಸ್ತೆಯ ಮಧ್ಯೆ ಬೈಕ್ ಬೀಳಿಸಿ ಬೆಂಕಿಯಿಟ್ಟು ಪುಂಡಾಟ ಮೆರೆದಿದ್ದಾನೆ. ಬೆಂಕಿಯಿಂದ ಬೈಕ್ ಹೊತ್ತಿ ಉರಿದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ನಶೆಯೇರಿ.. ಸೂರ್ಯಸಿಟಿಯಲ್ಲಿ ರಸ್ತೆ ಮಧ್ಯೆ ವಾಹನಕ್ಕೆ ಬೆಂಕಿ ಕಡ್ಡಿಗೀರಿದ!
ಸಾಧು ಶ್ರೀನಾಥ್​

Updated on: May 08, 2020 | 11:20 AM

ಆನೇಕಲ್: ಮದ್ಯದ ಅಮಲಿನಲ್ಲಿ ದ್ವಿಚಕ್ರ ವಾಹನಕ್ಕೆ ಬೆಂಕಿಯಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಸೂರ್ಯಸಿಟಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದಾಗಿನಿಂದ ಕುಡುಕರ ಅನೇಕ ಅವಾಂತರಗಳು ರಾಜ್ಯದಲ್ಲಿ ನಡೆಯುತ್ತಿವೆ. ಅದೇ ರೀತಿ ಇಲ್ಲೊಬ್ಬ ಕುಡುಕ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಬೈಕ್​ಗೆ ಬೆಂಕಿಯಿಟ್ಟಿದ್ದಾನೆ.

ನೂರಾರು ವಾಹನಗಳು ಸಂಚರಿಸುತ್ತಿದ್ದರು ಗಮನಿಸದೆ ಸೂರ್ಯನಗರದ ಮುಖ್ಯ ರಸ್ತೆಯ ಮಧ್ಯೆ ಬೈಕ್ ಬೀಳಿಸಿ ಬೆಂಕಿಯಿಟ್ಟು ಪುಂಡಾಟ ಮೆರೆದಿದ್ದಾನೆ. ಬೆಂಕಿಯಿಂದ ಬೈಕ್ ಹೊತ್ತಿ ಉರಿದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:18 am, Fri, 8 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us