AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಕಂದಮ್ಮಗಳ ಸಾಯಿಸಿದ್ದ ತಂದೆ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಕಲಬುರಗಿ: ಇಂದು ಬೆಳಗ್ಗೆ ತನ್ನ ಇಬ್ಬರು ಕಂದಮ್ಮಗಳನ್ನು ಸಾಯಿಸಿದ್ದ ತಂದೆ, ಇದೀಗ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದ ತಂದೆ ಸಂಜೀವ್ (30) ಆತ್ಮಹತ್ಯೆ ಮಾಡಿಕೊಂಡವ. ಆತ ತೆಲಂಗಾಣ ರಾಜ್ಯದ ತಾಂಡೂರು ಪಟ್ಟಣದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹಳಿ ಮೇಲೆ ಸಂಜೀವ್ ಶವ ಪತ್ತೆಯಾಗಿದೆ. ಬೆಳಗ್ಗೆ ಏನಾಗಿತ್ತೆಂದ್ರೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೈರಂಪಳ್ಳಿ ತಾಂಡಾದಲ್ಲಿ ತನ್ನ ಇಬ್ಬರು ಪುತ್ರಿಯರಿಗೆ ತಂದೆಯೇ ವಿಷ ಕುಡಿಸಿ ಸಾಯಿಸಿದ್ದ ಹೃದಯವಿದ್ರಾವಕ […]

ಇಬ್ಬರು ಕಂದಮ್ಮಗಳ ಸಾಯಿಸಿದ್ದ ತಂದೆ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:Jan 04, 2020 | 6:18 PM

Share

ಕಲಬುರಗಿ: ಇಂದು ಬೆಳಗ್ಗೆ ತನ್ನ ಇಬ್ಬರು ಕಂದಮ್ಮಗಳನ್ನು ಸಾಯಿಸಿದ್ದ ತಂದೆ, ಇದೀಗ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಬ್ಬರು ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿದ್ದ ತಂದೆ ಸಂಜೀವ್ (30) ಆತ್ಮಹತ್ಯೆ ಮಾಡಿಕೊಂಡವ. ಆತ ತೆಲಂಗಾಣ ರಾಜ್ಯದ ತಾಂಡೂರು ಪಟ್ಟಣದ ಹೊರವಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಹಳಿ ಮೇಲೆ ಸಂಜೀವ್ ಶವ ಪತ್ತೆಯಾಗಿದೆ.

ಬೆಳಗ್ಗೆ ಏನಾಗಿತ್ತೆಂದ್ರೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೈರಂಪಳ್ಳಿ ತಾಂಡಾದಲ್ಲಿ ತನ್ನ ಇಬ್ಬರು ಪುತ್ರಿಯರಿಗೆ ತಂದೆಯೇ ವಿಷ ಕುಡಿಸಿ ಸಾಯಿಸಿದ್ದ ಹೃದಯವಿದ್ರಾವಕ ಘಟನೆ ನಡೆದಿತ್ತು.

ತನ್ನ ಕಂದಮ್ಮಗಳಾದ ಪರ್ವೀನಾ(3) ಮತ್ತು ರೋಹಿತಾ(4)ರನ್ನು ಜಮೀನಿಗೆ ಕರೆದೊಯ್ದು ವಿಷ ಕುಡಿಸಿದ್ದ. ಮಿರಿಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೈದರಾಬಾದನಲ್ಲಿ ಕೆಲಸ ಮಾಡುತ್ತಿದ್ದ ಸಂಜೀವ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳಿಗೆ ವಿಷ ನೀಡಿರುವ ಶಂಕೆ ವ್ಯಕ್ತವಾಗಿತ್ತು.

Published On - 1:46 pm, Fri, 3 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More