ನಿರಾಶೆಯ ಕಾರ್ಮೋಡ! ನಾಳೆ ಕಂಕಣ ಸೂರ್ಯ ಗ್ರಹಣ ಗೋಚರ ಡೌಟ್

ಬೆಂಗಳೂರು: ಒಂಬತ್ತು ವರ್ಷಗಳ ಬಳಿಕ ನಾಳೆ ಅಪರೂಪದಲ್ಲಿ ಅಪರೂಪವಾದ ಕಂಕಣ ಸೂರ್ಯ ಗ್ರಹಣ ಗೋಚರಿಸುತ್ತೆ. ಇದನ್ನು ಕಣ್ತುಂಬಿಕೊಳ್ಳಬೇಕು ಅಂತಾ ವಿಜ್ಞಾನಿಗಳು, ಜನ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ದೃಶ್ಯ ಕಣ್ತುಂಬಿಕೊಳ್ಳೋಕೆ ಕಂಟಕ ಎದುರಾಗಿದೆ. ಸದ್ಯ ನಗರದಲ್ಲಿ ಮೋಡ ಮುಸುಕಿದ ವಾತಾವರಣ ಇರೋದ್ರಿಂದ ಕಂಕಣ ಸೂರ್ಯ ಗ್ರಹಣ ಗೋಚರವಾಗೋದು ಡೌಟ್ ಆಗಿದೆ. ಮೋಡಗಳು ಸೂರ್ಯನನ್ನು ಸುತ್ತುವರೆದಿವೆ. ನಿನ್ನೆ ನೆಹರೂ ತಾರಾಲಯದ ನಿರ್ದೇಶಕರು 90 ರಷ್ಟು ಗ್ರಹಣ ಗೋಚರವಾಗುತ್ತೆ. ಆದರೆ ಹೆಚ್ಚು ಮೋಡಗಳಿದ್ದರೆ ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಇಂದೂ […]

ನಿರಾಶೆಯ ಕಾರ್ಮೋಡ! ನಾಳೆ ಕಂಕಣ ಸೂರ್ಯ ಗ್ರಹಣ ಗೋಚರ ಡೌಟ್
ಸಾಧು ಶ್ರೀನಾಥ್​

Updated on: Dec 25, 2019 | 12:00 PM

ಬೆಂಗಳೂರು: ಒಂಬತ್ತು ವರ್ಷಗಳ ಬಳಿಕ ನಾಳೆ ಅಪರೂಪದಲ್ಲಿ ಅಪರೂಪವಾದ ಕಂಕಣ ಸೂರ್ಯ ಗ್ರಹಣ ಗೋಚರಿಸುತ್ತೆ. ಇದನ್ನು ಕಣ್ತುಂಬಿಕೊಳ್ಳಬೇಕು ಅಂತಾ ವಿಜ್ಞಾನಿಗಳು, ಜನ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಈ ದೃಶ್ಯ ಕಣ್ತುಂಬಿಕೊಳ್ಳೋಕೆ ಕಂಟಕ ಎದುರಾಗಿದೆ. ಸದ್ಯ ನಗರದಲ್ಲಿ ಮೋಡ ಮುಸುಕಿದ ವಾತಾವರಣ ಇರೋದ್ರಿಂದ ಕಂಕಣ ಸೂರ್ಯ ಗ್ರಹಣ ಗೋಚರವಾಗೋದು ಡೌಟ್ ಆಗಿದೆ. ಮೋಡಗಳು ಸೂರ್ಯನನ್ನು ಸುತ್ತುವರೆದಿವೆ.

ನಿನ್ನೆ ನೆಹರೂ ತಾರಾಲಯದ ನಿರ್ದೇಶಕರು 90 ರಷ್ಟು ಗ್ರಹಣ ಗೋಚರವಾಗುತ್ತೆ. ಆದರೆ ಹೆಚ್ಚು ಮೋಡಗಳಿದ್ದರೆ ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಇಂದೂ ಕೂಡ ನಗರದೆಲ್ಲೆಡೆ ಮೋಡ ಮುಸುಕಿದ ವಾತಾವರಣ ಇದೆ. ಅಲ್ಲದೆ ಇನ್ನೂ ಎರಡು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ನಾಳೆ ಗ್ರಹಣ ಗೋಚರವಾಗೋದು ಅನುಮಾನವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us