AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ. ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ […]

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..
ಆಯೇಷಾ ಬಾನು
|

Updated on:Jul 05, 2020 | 12:14 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ.

ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದ್ರೆ, ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಿಲ್ಲ. ಕೊನೆಗೆ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಲ್ಲಿಯೂ ಸಿಬ್ಬಂದಿ ಅಡ್ಮಿಟ್ ಮಾಡಿಕೊಂಡಿಲ್ಲ. ರಾಜಕಾರಣಿಯೊಬ್ರು ಪೋನ್ ಮಾಡಿ ಹೇಳಿದ್ರೂ ನಿರ್ಲಕ್ಷ್ಯವಹಿಸಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕಾಡಿ ಬೇಡಿದ್ರೂ ವೈದ್ಯರು ಕರುಣೆ ತೋರಿಲ್ಲ. ವೈದ್ಯ ನಿರ್ಲಕ್ಷ್ಯದಿಂದಾಗಿ ಮಹಿಳೆ ಕೊನೆಯುಸಿರೆಳೆದಿದ್ದಾರೆ. ನತದೃಷ್ಟ ಮಗನ ಕಣ್ಣೆದುರೇ ಹೆತ್ತ ತಾಯಿ ಜೀವಬಿಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ವಿರುದ್ಧ ಮೃತಳ ಮಗ ಆರೋಪಿಸಿದ್ದಾರೆ. ತನ್ನ ತಾಯಿ ಸಾವು ಕಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಆಕ್ಸಿಜನ್ ಕೊಟ್ಟಿದ್ರೆ ನನ್ನ ತಾಯಿ ಬದುಕುತ್ತಿದ್ರು ಕಾಡಿ ಬೇಡಿ, ಕಣ್ಣೀರಿಟ್ರೂ ಎಮರ್ಜೆನ್ಸಿಗೆ ಸೇರಿಸಿಕೊಂಡಿಲ್ಲ. ಸಾಮಾನ್ಯರ ಕಷ್ಟಕ್ಕೆ ಯಾವ ಆಸ್ಪತ್ರೆಯೂ ಆಗ್ತಿಲ್ಲ. ಬೆಡ್ ಇಲ್ಲ ಌಂಬುಲೆನ್ಸ್ ವ್ಯವಸ್ಥೆ ಸರಿಯಾಗಿ ಸಿಗುತ್ತಿಲ್ಲ ಎಂದು ಹೆತ್ತ ತಾಯಿಯ ಕಳೆದುಕೊಂಡ ಮಗ ಲೋಕೇಶ್ ಗೋಳಾಡಿದ್ದಾರೆ.

Published On - 12:12 pm, Sun, 5 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ