AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ. ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ […]

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..
ಆಯೇಷಾ ಬಾನು
|

Updated on:Jul 05, 2020 | 12:14 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ.

ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದ್ರೆ, ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಿಲ್ಲ. ಕೊನೆಗೆ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಲ್ಲಿಯೂ ಸಿಬ್ಬಂದಿ ಅಡ್ಮಿಟ್ ಮಾಡಿಕೊಂಡಿಲ್ಲ. ರಾಜಕಾರಣಿಯೊಬ್ರು ಪೋನ್ ಮಾಡಿ ಹೇಳಿದ್ರೂ ನಿರ್ಲಕ್ಷ್ಯವಹಿಸಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕಾಡಿ ಬೇಡಿದ್ರೂ ವೈದ್ಯರು ಕರುಣೆ ತೋರಿಲ್ಲ. ವೈದ್ಯ ನಿರ್ಲಕ್ಷ್ಯದಿಂದಾಗಿ ಮಹಿಳೆ ಕೊನೆಯುಸಿರೆಳೆದಿದ್ದಾರೆ. ನತದೃಷ್ಟ ಮಗನ ಕಣ್ಣೆದುರೇ ಹೆತ್ತ ತಾಯಿ ಜೀವಬಿಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ವಿರುದ್ಧ ಮೃತಳ ಮಗ ಆರೋಪಿಸಿದ್ದಾರೆ. ತನ್ನ ತಾಯಿ ಸಾವು ಕಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಆಕ್ಸಿಜನ್ ಕೊಟ್ಟಿದ್ರೆ ನನ್ನ ತಾಯಿ ಬದುಕುತ್ತಿದ್ರು ಕಾಡಿ ಬೇಡಿ, ಕಣ್ಣೀರಿಟ್ರೂ ಎಮರ್ಜೆನ್ಸಿಗೆ ಸೇರಿಸಿಕೊಂಡಿಲ್ಲ. ಸಾಮಾನ್ಯರ ಕಷ್ಟಕ್ಕೆ ಯಾವ ಆಸ್ಪತ್ರೆಯೂ ಆಗ್ತಿಲ್ಲ. ಬೆಡ್ ಇಲ್ಲ ಌಂಬುಲೆನ್ಸ್ ವ್ಯವಸ್ಥೆ ಸರಿಯಾಗಿ ಸಿಗುತ್ತಿಲ್ಲ ಎಂದು ಹೆತ್ತ ತಾಯಿಯ ಕಳೆದುಕೊಂಡ ಮಗ ಲೋಕೇಶ್ ಗೋಳಾಡಿದ್ದಾರೆ.

Published On - 12:12 pm, Sun, 5 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್