AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ. ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ […]

ಕಾಡಿ ಬೇಡಿದ್ರೂ ಸಿಗಲಿಲ್ಲ ಚಿಕಿತ್ಸೆ, ಹೃದಯಾಘಾತಕ್ಕೆ ನರಳಿ ನರಳಿ ಮಗನ ಎದುರೇ ಪ್ರಾಣ ಬಿಟ್ರು..
ಆಯೇಷಾ ಬಾನು
|

Updated on:Jul 05, 2020 | 12:14 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಆಸ್ಪತ್ರೆಯ ನಿರ್ಲಕ್ಷ್ಯ ಜೀವ ಬಲಿ ಪಡೆಯುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕರುಣಾಜನಕ ಕಥೆ ಕಂಡು ಬಂದಿದೆ. ಉಸಿರು ನಿಲ್ಲೋ ಸಮಯದಲ್ಲೂ ಚಿಕಿತ್ಸೆ ಸಿಗಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡದೇ ಸಿಬ್ಬಂದಿ ನಿರ್ಲಕ್ಷ್ಯವಹಿಸಿ ಜೀವವೊಂದು ಬಲಿಯಾಗಿರುವ ಘಟನೆ ಮರು ಕಳಿಸಿದೆ.

ನಿನ್ನೆ ಕುರುಬರಹಳ್ಳಿ ಮಹಿಳೆಗೆ ಹೃದಯಾಘಾತವಾಗಿತ್ತು. ಹೀಗಾಗಿ ಚಿಕಿತ್ಸೆ ಕೊಡಿಸಲು ತಾಯಿಯನ್ನು ಕರೆದುಕೊಂಡು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಜಯದೇವ ಸೇರಿ ವಿವಿಧ ಆಸ್ಪತ್ರೆಗಳಿಗೆ ಸುತ್ತಾಡಿದ್ದಾರೆ. ಆದ್ರೆ, ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಿಲ್ಲ. ಕೊನೆಗೆ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಲ್ಲಿಯೂ ಸಿಬ್ಬಂದಿ ಅಡ್ಮಿಟ್ ಮಾಡಿಕೊಂಡಿಲ್ಲ. ರಾಜಕಾರಣಿಯೊಬ್ರು ಪೋನ್ ಮಾಡಿ ಹೇಳಿದ್ರೂ ನಿರ್ಲಕ್ಷ್ಯವಹಿಸಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕಾಡಿ ಬೇಡಿದ್ರೂ ವೈದ್ಯರು ಕರುಣೆ ತೋರಿಲ್ಲ. ವೈದ್ಯ ನಿರ್ಲಕ್ಷ್ಯದಿಂದಾಗಿ ಮಹಿಳೆ ಕೊನೆಯುಸಿರೆಳೆದಿದ್ದಾರೆ. ನತದೃಷ್ಟ ಮಗನ ಕಣ್ಣೆದುರೇ ಹೆತ್ತ ತಾಯಿ ಜೀವಬಿಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ವಿರುದ್ಧ ಮೃತಳ ಮಗ ಆರೋಪಿಸಿದ್ದಾರೆ. ತನ್ನ ತಾಯಿ ಸಾವು ಕಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಆಕ್ಸಿಜನ್ ಕೊಟ್ಟಿದ್ರೆ ನನ್ನ ತಾಯಿ ಬದುಕುತ್ತಿದ್ರು ಕಾಡಿ ಬೇಡಿ, ಕಣ್ಣೀರಿಟ್ರೂ ಎಮರ್ಜೆನ್ಸಿಗೆ ಸೇರಿಸಿಕೊಂಡಿಲ್ಲ. ಸಾಮಾನ್ಯರ ಕಷ್ಟಕ್ಕೆ ಯಾವ ಆಸ್ಪತ್ರೆಯೂ ಆಗ್ತಿಲ್ಲ. ಬೆಡ್ ಇಲ್ಲ ಌಂಬುಲೆನ್ಸ್ ವ್ಯವಸ್ಥೆ ಸರಿಯಾಗಿ ಸಿಗುತ್ತಿಲ್ಲ ಎಂದು ಹೆತ್ತ ತಾಯಿಯ ಕಳೆದುಕೊಂಡ ಮಗ ಲೋಕೇಶ್ ಗೋಳಾಡಿದ್ದಾರೆ.

Published On - 12:12 pm, Sun, 5 July 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ