AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಭಾರಿ ಅಬ್ಬರ: ಮನೆ, ಬೆಳೆ ಜಲಾವೃತ

ಬಾಗಲಕೋಟೆ: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳು, ಪುನರ್‌ವಸತಿ ಕೇಂದ್ರದ ಬಳಿಯಿರುವ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ. ನಿನ್ನೆ ರಾತ್ರಿ ತುಬಚಿ, ಜಂಬಗಿ ಕೆಡಿ, ಶೂರ್ಪಾಲಿ ಗ್ರಾಮಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಧಾರಾಕಾರ ಸುರಿದ ಮಳೆಗೆ ಗ್ರಾಮಗಳು ನಲುಗಿ ಹೋಗಿವೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳಿಗೆ ಹಾಗೂ ಪುನರ್ ವಸತಿ ಕೇಂದ್ರದ ಸಮೀಪದ ಮನೆಗಳಿಗೂ ನೀರು ನುಗ್ಗಿದೆ. ಮೊಣಕಾಲೆತ್ತರದವರೆಗೂ ಮನೆ ಸುತ್ತ ಮಳೆ ನೀರು […]

ಮಳೆರಾಯನ ಭಾರಿ ಅಬ್ಬರ: ಮನೆ, ಬೆಳೆ ಜಲಾವೃತ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 10, 2020 | 1:29 PM

Share

ಬಾಗಲಕೋಟೆ: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳು, ಪುನರ್‌ವಸತಿ ಕೇಂದ್ರದ ಬಳಿಯಿರುವ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುವಂತಾಗಿದೆ.

ನಿನ್ನೆ ರಾತ್ರಿ ತುಬಚಿ, ಜಂಬಗಿ ಕೆಡಿ, ಶೂರ್ಪಾಲಿ ಗ್ರಾಮಗಳಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಧಾರಾಕಾರ ಸುರಿದ ಮಳೆಗೆ ಗ್ರಾಮಗಳು ನಲುಗಿ ಹೋಗಿವೆ. ಶೂರ್ಪಾಲಿ ಗ್ರಾಮದ ತೋಟದ ಮನೆಗಳಿಗೆ ಹಾಗೂ ಪುನರ್ ವಸತಿ ಕೇಂದ್ರದ ಸಮೀಪದ ಮನೆಗಳಿಗೂ ನೀರು ನುಗ್ಗಿದೆ. ಮೊಣಕಾಲೆತ್ತರದವರೆಗೂ ಮನೆ ಸುತ್ತ ಮಳೆ ನೀರು ಆವರಿಸಿದೆ.

ಹೊಲಗಳು ನೀರಿನಿಂದ ತುಂಬಿ ಹೋಗಿವೆ. ಮನೆಗಳು, ಬೆಳೆಗಳು ಜಲಾವೃತವಾಗಿವೆ. ಜನ, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಹೈರಾಣಾಗಿದ್ದಾರೆ. ಕಳೆದ ವರ್ಷ ಆದ ಕೃಷ್ಣಾ ಪ್ರವಾಹ ಮಾಸುವ ಮುನ್ನವೇ ಈಗ ಮತ್ತೆ ಇಂತಹ ಸಂಕಷ್ಟ ಎದುರಿಸುತ್ತಿರುವುದು ಜನರಿಗೆ ಆತಂಕ ತಂದಿದೆ.

Published On - 11:20 am, Fri, 10 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ