AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನ ಇಲ್ಲಿ ಬಂಧಿಸಿಡೋ ಬದಲು ಜೈಲಿಗಾದ್ರೂ ಹಾಕಿ.. ಹೀಗಂದವರು ಯಾರು?

ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹತ್ತು ಗಂಟೆಯಾದರೂ ಇಲ್ಲಿ ಕಾಫಿ ಹಾಗಿರಲಿ.. ಒಂದು ಗ್ಲಾಸ್ ಬಿಸಿ ನೀರು ಸಹ ಕೊಡುತ್ತಿಲ್ಲ. ಶೌಚಾಲಯಕ್ಕೆ ಹೋಗೋಣ ಎಂದರೆ ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಹೀಗಾಗಿ ಇದೇ ವ್ಯವಸ್ಥೆಯಲ್ಲಿ ಇದ್ದರೆ […]

ನಮ್ಮನ್ನ ಇಲ್ಲಿ ಬಂಧಿಸಿಡೋ ಬದಲು ಜೈಲಿಗಾದ್ರೂ ಹಾಕಿ.. ಹೀಗಂದವರು ಯಾರು?
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 1:44 PM

Share

ಚಿಕ್ಕಮಗಳೂರು: ಕ್ವಾರಂಟಿನ್ ಸೆಂಟರ್ ಗಳ ಅವ್ಯವಸ್ಥೆಯಿಂದ ರೋಸಿ ಹೋಗಿರುವ ಕೊರೊನಾ ಸೋಂಕಿತರು, ನಮ್ಮನ್ನ ಇಲ್ಲಿ ಬಂಧಿಸಿಡುವ ಬದಲು ಜೈಲಿಗಾದರೂ ಹಾಕಿ. ಕೊನೆಯ ಪಕ್ಷ ಅಲ್ಲಿ ರಾಗಿಮುದ್ದೆ ತಿಂದ್ಕೊಂಡಾದ್ರೂ ಜೀವನ ನಡೆಸುತ್ತೇವೆ ಎಂದು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಹತ್ತು ಗಂಟೆಯಾದರೂ ಇಲ್ಲಿ ಕಾಫಿ ಹಾಗಿರಲಿ.. ಒಂದು ಗ್ಲಾಸ್ ಬಿಸಿ ನೀರು ಸಹ ಕೊಡುತ್ತಿಲ್ಲ. ಶೌಚಾಲಯಕ್ಕೆ ಹೋಗೋಣ ಎಂದರೆ ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬು ನಾರುತ್ತಿವೆ. ಹೀಗಾಗಿ ಇದೇ ವ್ಯವಸ್ಥೆಯಲ್ಲಿ ಇದ್ದರೆ ನಾವು ಕೊರೊನಾವನ್ನು ನಮ್ಮ ಮನೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಸೋಂಕಿತರು ಭಯಭೀತರಾಗಿದ್ದಾರೆ.

ಜೊತೆಗೆ ನಮ್ಮಲ್ಲಿ ಯಾವುದೇ ರೋಗ ಲಕ್ಷಣಗಳು ಇಲ್ಲ. ಹಾಗಾಗಿ ನಮಗೆ ಕೊರೊನಾ ಟೆಸ್ಟ್ ಮಾಡಿಸಿ. ವರದಿಯಲ್ಲಿ ಪಾಸಿಟಿವ್ ಬಂದರೆ ನಮ್ಮನ್ನು ಇಲ್ಲೇ ಇರಿಸಿಕೊಳ್ಳಲ್ಲಿ, ಇಲ್ಲದಿದ್ದರೆ ನಮ್ಮನ್ನು ಮನೆಗೆ ಕಳುಹಿಸಿಕೊಡಲಿ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಜೊತೆಗೆ ನಮ್ಮ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ದೋಚಲು ಜಿಲ್ಲಾಡಳಿತ ಹೀಗೆ ನಮ್ಮನ್ನು ಕೂಡಿಹಾಕಿದೆ ಎಂದೂ ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಸೋಂಕಿತರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

Published On - 11:30 am, Wed, 22 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು