ಬಿಎಸ್ಸಿ ಪದವೀಧರ ಕೆಲಸಕ್ಕಾಗಿ ಅಲೆದಲೆದು ಪ್ರಾಣವನ್ನೆ ಬಲಿ ಕೊಟ್ಟ, ಯಾವೂರಲ್ಲಿ?

ಚಿಕ್ಕಬಳ್ಳಾಪುರ: ನಿರುದ್ಯೋಗ ಸಮಸ್ಯೆಯಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾರ್ಟರ್ಸ್​​ನಲ್ಲಿ ನಡೆದಿದೆ. ಮನೋಜ್ ಕುಮಾರ್(22) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಂಬಂಧಿಯೊಬ್ಬರ ಕ್ವಾರ್ಟರ್ಸ್​ನಲ್ಲಿ ಉಳಿದುಕೊಂಡಿದ್ದ ಮನೋಜ್ ಕುಮಾರ್ ಬಿಎಸ್ಸಿ ಪದವಿ ಪಡೆದು ಕೆಲಸಕ್ಕಾಗಿ ಅಲೆಯುತ್ತಿದ್ದ. ​ಯಾವುದೇ ಕೆಲಸ ಸಿಗದೆ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮನೋಜ್ ಕ್ವಾರ್ಟರ್ಸ್​ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ […]

ಬಿಎಸ್ಸಿ ಪದವೀಧರ ಕೆಲಸಕ್ಕಾಗಿ ಅಲೆದಲೆದು ಪ್ರಾಣವನ್ನೆ ಬಲಿ ಕೊಟ್ಟ, ಯಾವೂರಲ್ಲಿ?
Edited By: ಸಾಧು ಶ್ರೀನಾಥ್​

Updated on: Nov 04, 2020 | 4:07 PM

ಚಿಕ್ಕಬಳ್ಳಾಪುರ: ನಿರುದ್ಯೋಗ ಸಮಸ್ಯೆಯಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾರ್ಟರ್ಸ್​​ನಲ್ಲಿ ನಡೆದಿದೆ.

ಮನೋಜ್ ಕುಮಾರ್(22) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಂಬಂಧಿಯೊಬ್ಬರ ಕ್ವಾರ್ಟರ್ಸ್​ನಲ್ಲಿ ಉಳಿದುಕೊಂಡಿದ್ದ ಮನೋಜ್ ಕುಮಾರ್ ಬಿಎಸ್ಸಿ ಪದವಿ ಪಡೆದು ಕೆಲಸಕ್ಕಾಗಿ ಅಲೆಯುತ್ತಿದ್ದ. ​ಯಾವುದೇ ಕೆಲಸ ಸಿಗದೆ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮನೋಜ್ ಕ್ವಾರ್ಟರ್ಸ್​ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 4:05 pm, Wed, 4 November 20

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us