AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?

ಮೈಸೂರು: ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ಮಾರಾಟ ಮಾಡಿ 30 ಲಕ್ಷ ರೂಪಾಯಿ ವಂಚಿಸಿದ ಖತರ್ನಾಕ್ ಕಳ್ಳರನ್ನು ಮೈಸೂರಿನ ಸರಸ್ವತಿಪುರಂ ಪೊಲೀಸರು ಬಂಧಿಸಿರುವ ಘಟನೆ ಇಂದು ನಡೆದಿದೆ. ಮೈಸೂರಿನ ಕುಂಬಾರಕೊಪ್ಪಲಿನ ರಾಘವೇಂದ್ರ ಎಂಬುವವರು ವಂಚನೆಗೆ ಒಳಗಾಗಿದ್ದು, ರಾಘವೇಂದ್ರ ಅವರಿಗೆ ಪುರಾತನ ಕಾಲದ ಚಿನ್ನದ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇರುವುದರಿಂದ ಭೀಮ ಅಲಿಯಾಸ್ ಡೈನಾ ಮತ್ತು ಅರ್ಜುನ್ ಅಲಿಯಾಸ್ ಮಾರ್ವಾಡ ಎಂಬುವವರು ರಾಘವೇಂದ್ರ ಅವರಿಗೆ ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ನಕಲಿ ಚಿನ್ನದ ಗುಂಡುಗಳನ್ನು […]

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 03, 2020 | 5:39 PM

Share

ಮೈಸೂರು: ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ಮಾರಾಟ ಮಾಡಿ 30 ಲಕ್ಷ ರೂಪಾಯಿ ವಂಚಿಸಿದ ಖತರ್ನಾಕ್ ಕಳ್ಳರನ್ನು ಮೈಸೂರಿನ ಸರಸ್ವತಿಪುರಂ ಪೊಲೀಸರು ಬಂಧಿಸಿರುವ ಘಟನೆ ಇಂದು ನಡೆದಿದೆ.

ಮೈಸೂರಿನ ಕುಂಬಾರಕೊಪ್ಪಲಿನ ರಾಘವೇಂದ್ರ ಎಂಬುವವರು ವಂಚನೆಗೆ ಒಳಗಾಗಿದ್ದು, ರಾಘವೇಂದ್ರ ಅವರಿಗೆ ಪುರಾತನ ಕಾಲದ ಚಿನ್ನದ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇರುವುದರಿಂದ ಭೀಮ ಅಲಿಯಾಸ್ ಡೈನಾ ಮತ್ತು ಅರ್ಜುನ್ ಅಲಿಯಾಸ್ ಮಾರ್ವಾಡ ಎಂಬುವವರು ರಾಘವೇಂದ್ರ ಅವರಿಗೆ ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ನಕಲಿ ಚಿನ್ನದ ಗುಂಡುಗಳನ್ನು ನೀಡಿ 30 ಲಕ್ಷ ರೂಪಾಯಿ ಗಳನ್ನು ಪಡೆದುಕೊಂಡಿದ್ದರು.

ಆದರೆ ಆರೋಪಿಗಳು ನೀಡಿರುವ ಚಿನ್ನ ನಕಲಿ ಎಂದು ತಿಳಿದಿದೆ. ಹೀಗಾಗಿ ರಾಘವೇಂದ್ರರವರು ಸರಸ್ವತಿಪುರಂ ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಭೀಮ ಅಲಿಯಾಸ್ ಡೈನಾ ಮತ್ತು ಅರ್ಜುನ್ ಅಲಿಯಾಸ್ ಮಾರ್ವಾಡ ಎಂಬ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಜೊತೆಗೆ ಬಂಧಿತರಿಂದ 20 ಲಕ್ಷ ನಗದು ಹಾಗೂ ಎರಡು ಮೋಟಾರು ಬೈಕ್ ಮತ್ತು ಮೊಬೈಲ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಕೃತ್ಯದಲ್ಲಿ ಒಟ್ಟು ಏಳು ಜನರ ತಂಡ ಭಾಗಿಯಾಗಿದ್ದು ಪೊಲೀಸರು ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 4:43 pm, Mon, 3 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್