AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?

ಮೈಸೂರು: ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ಮಾರಾಟ ಮಾಡಿ 30 ಲಕ್ಷ ರೂಪಾಯಿ ವಂಚಿಸಿದ ಖತರ್ನಾಕ್ ಕಳ್ಳರನ್ನು ಮೈಸೂರಿನ ಸರಸ್ವತಿಪುರಂ ಪೊಲೀಸರು ಬಂಧಿಸಿರುವ ಘಟನೆ ಇಂದು ನಡೆದಿದೆ. ಮೈಸೂರಿನ ಕುಂಬಾರಕೊಪ್ಪಲಿನ ರಾಘವೇಂದ್ರ ಎಂಬುವವರು ವಂಚನೆಗೆ ಒಳಗಾಗಿದ್ದು, ರಾಘವೇಂದ್ರ ಅವರಿಗೆ ಪುರಾತನ ಕಾಲದ ಚಿನ್ನದ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇರುವುದರಿಂದ ಭೀಮ ಅಲಿಯಾಸ್ ಡೈನಾ ಮತ್ತು ಅರ್ಜುನ್ ಅಲಿಯಾಸ್ ಮಾರ್ವಾಡ ಎಂಬುವವರು ರಾಘವೇಂದ್ರ ಅವರಿಗೆ ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ನಕಲಿ ಚಿನ್ನದ ಗುಂಡುಗಳನ್ನು […]

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 03, 2020 | 5:39 PM

Share

ಮೈಸೂರು: ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ಮಾರಾಟ ಮಾಡಿ 30 ಲಕ್ಷ ರೂಪಾಯಿ ವಂಚಿಸಿದ ಖತರ್ನಾಕ್ ಕಳ್ಳರನ್ನು ಮೈಸೂರಿನ ಸರಸ್ವತಿಪುರಂ ಪೊಲೀಸರು ಬಂಧಿಸಿರುವ ಘಟನೆ ಇಂದು ನಡೆದಿದೆ.

ಮೈಸೂರಿನ ಕುಂಬಾರಕೊಪ್ಪಲಿನ ರಾಘವೇಂದ್ರ ಎಂಬುವವರು ವಂಚನೆಗೆ ಒಳಗಾಗಿದ್ದು, ರಾಘವೇಂದ್ರ ಅವರಿಗೆ ಪುರಾತನ ಕಾಲದ ಚಿನ್ನದ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಇರುವುದರಿಂದ ಭೀಮ ಅಲಿಯಾಸ್ ಡೈನಾ ಮತ್ತು ಅರ್ಜುನ್ ಅಲಿಯಾಸ್ ಮಾರ್ವಾಡ ಎಂಬುವವರು ರಾಘವೇಂದ್ರ ಅವರಿಗೆ ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ, ನಕಲಿ ಚಿನ್ನದ ಗುಂಡುಗಳನ್ನು ನೀಡಿ 30 ಲಕ್ಷ ರೂಪಾಯಿ ಗಳನ್ನು ಪಡೆದುಕೊಂಡಿದ್ದರು.

ಆದರೆ ಆರೋಪಿಗಳು ನೀಡಿರುವ ಚಿನ್ನ ನಕಲಿ ಎಂದು ತಿಳಿದಿದೆ. ಹೀಗಾಗಿ ರಾಘವೇಂದ್ರರವರು ಸರಸ್ವತಿಪುರಂ ಪೊಲೀಸರಿಗೆ ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಭೀಮ ಅಲಿಯಾಸ್ ಡೈನಾ ಮತ್ತು ಅರ್ಜುನ್ ಅಲಿಯಾಸ್ ಮಾರ್ವಾಡ ಎಂಬ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಜೊತೆಗೆ ಬಂಧಿತರಿಂದ 20 ಲಕ್ಷ ನಗದು ಹಾಗೂ ಎರಡು ಮೋಟಾರು ಬೈಕ್ ಮತ್ತು ಮೊಬೈಲ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಕೃತ್ಯದಲ್ಲಿ ಒಟ್ಟು ಏಳು ಜನರ ತಂಡ ಭಾಗಿಯಾಗಿದ್ದು ಪೊಲೀಸರು ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 4:43 pm, Mon, 3 August 20

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು