AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾದೇವಿ ಜಾತ್ರೆಯಲ್ಲಿ ಕೋಳಿಗಳ ದರ್ಬಾರ್: ಇಂದು ಡಿಕೆಶಿ ಭೇಟಿ!

ಯಾದಗಿರಿ: ಜಾತ್ರೆ ಅಂದ್ರೆ ಸುತ್ತಮುತ್ತಲ ಜನರಿಗೆ ಸಂಭ್ರಮದ ಕ್ಷಣ. ಅದ್ರಲ್ಲೂ ಒಂದೊಂದು ಕಡೆ ಒಂದೊಂದು ವಿಶೇಷತೆ ಇರುತ್ತೆ. ಯಾದಗಿರಿಯಲ್ಲೂ ನಡೆದ ದುರ್ಗಾದೇವಿ ಜಾತ್ರೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಮೈತುಂಬಾ ಭಕ್ತಿಯ ಭಂಡಾರ.. ಹೆಜ್ಜೆ ಹೆಜ್ಜೆಗೂ ಚೆಲ್ಲಿರೋ ಅರಿಶಿನ ಕುಂಕುಮ. ದೇವರಧ್ಯಾನದಲ್ಲಿ ಮುಳುಗಿರೋ ಭಕ್ತಸಾಗರ. ನೋಡ ನೋಡುತ್ತಲೇ ಜನರ ನಡುವೆ ದೇವರ ಪಲ್ಲಕ್ಕಿ ಸಾಗಿ ಬಂದಿತ್ತು. ಕೇಕೆ ಶಿಳ್ಳೆ ಮೂಲಕ ಜನ ಕೂಡ ಅಬ್ಬರಿಸಿದ್ರು. ಜಾತ್ರೆ ಅಂದ್ಮೇಲೆ ಇಷ್ಟೊಂದ್ ಜೋಶ್ ಇರ್ಲೇಬೇಕು ಬಿಡಿ. ಬಟ್ ಅದಕ್ಕಿಂತ ಇಲ್ಲಿ ಸ್ಪೆಷಲ್ […]

ದುರ್ಗಾದೇವಿ ಜಾತ್ರೆಯಲ್ಲಿ ಕೋಳಿಗಳ ದರ್ಬಾರ್: ಇಂದು ಡಿಕೆಶಿ ಭೇಟಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 29, 2020 | 9:04 AM

Share

ಯಾದಗಿರಿ: ಜಾತ್ರೆ ಅಂದ್ರೆ ಸುತ್ತಮುತ್ತಲ ಜನರಿಗೆ ಸಂಭ್ರಮದ ಕ್ಷಣ. ಅದ್ರಲ್ಲೂ ಒಂದೊಂದು ಕಡೆ ಒಂದೊಂದು ವಿಶೇಷತೆ ಇರುತ್ತೆ. ಯಾದಗಿರಿಯಲ್ಲೂ ನಡೆದ ದುರ್ಗಾದೇವಿ ಜಾತ್ರೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ.

ಮೈತುಂಬಾ ಭಕ್ತಿಯ ಭಂಡಾರ.. ಹೆಜ್ಜೆ ಹೆಜ್ಜೆಗೂ ಚೆಲ್ಲಿರೋ ಅರಿಶಿನ ಕುಂಕುಮ. ದೇವರಧ್ಯಾನದಲ್ಲಿ ಮುಳುಗಿರೋ ಭಕ್ತಸಾಗರ. ನೋಡ ನೋಡುತ್ತಲೇ ಜನರ ನಡುವೆ ದೇವರ ಪಲ್ಲಕ್ಕಿ ಸಾಗಿ ಬಂದಿತ್ತು. ಕೇಕೆ ಶಿಳ್ಳೆ ಮೂಲಕ ಜನ ಕೂಡ ಅಬ್ಬರಿಸಿದ್ರು. ಜಾತ್ರೆ ಅಂದ್ಮೇಲೆ ಇಷ್ಟೊಂದ್ ಜೋಶ್ ಇರ್ಲೇಬೇಕು ಬಿಡಿ. ಬಟ್ ಅದಕ್ಕಿಂತ ಇಲ್ಲಿ ಸ್ಪೆಷಲ್ ಅಂದ್ರೆ ಇದೇ ಕೊಕ್ಕೊಕ್ಕೋ ಕೋಳಿಗಳು. ಖಡಕ್ ಹುಂಜದಿಂದ ಹಿಡ್ದು ಗುಂಡು ಗುಂಡು ಕೋಳಿಗಳವರೆಗೂ ಎಲ್ರ ಕೈಯಲ್ಲೂ ಕೋಳಿಗಳದ್ದೇ ದರ್ಬಾರ್.

ಕೋಳಿಗಳನ್ನ ಪಲ್ಲಕ್ಕಿ ಮೇಲೆ ಎಸೆದು ಹರಕೆ ತೀರಿಸಿದ ಭಕ್ತರು: ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಗೋನಾಳ್ ಗ್ರಾಮದ ಗಡ್ಡೆ ದುರ್ಗಾದೇವಿ ಜಾತ್ರೆಯಲ್ಲಿ ನಡೆದ ಪಲ್ಲಕ್ಕಿ ಉತ್ಸವದ ನೋಟವಿದು. ದೇವಿಯನ್ನ ಪಲ್ಲಕ್ಕಿಯಲ್ಲಿ ಕರೆದೊಯ್ದು ಕೃಷ್ಣಾ ನದಿಯಲ್ಲಿ ಗಂಗಾಸ್ನಾನ ಮಾಡಿಸಿ ಮೆರವಣಿಗೆ ಮೂಲಕ ಕರೆ ತರುತ್ತಾರೆ. ಬಳಿಕ ದೇವಿಯ ಪಲ್ಲಕಿಯನ್ನ ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗುತ್ತೆ. ಇನ್ನು ದೇವಸ್ಥಾನದ ಮುಂದೆ ರೆಡಿಯಾದ ಕೆಂಡದಲ್ಲಿ ದೇಗುಲದ ಪೂಜಾರಿ ಹಾಗೂ ಪಲ್ಲಕ್ಕಿಯ ಪ್ರವೇಶವಾಗುತ್ತೆ. ಇದೆ ವೇಳೆ ನೂರಾರು ಭಕ್ತರು ತಂದಿರುವ ಕೋಳಿ ಮತ್ತು ಹುಂಜಗಳನ್ನ ಪಲ್ಲಕ್ಕಿ ಮೇಲೆ ಎಸೆದು ಹರಕೆ ತೀರಿಸ್ತಾರೆ. ಶಕ್ತಿ ದೇವತೆ ಗಡ್ಡಿ ದುರ್ಗಾದೇವಿ ದರ್ಶನ ಪಡೆಯಲು ರಾಜ್ಯ ಸೇರಿದಂತೆ ರಾಜ್ಯದ ನೂರಾರು ಭಕ್ತರು ಬರುತ್ತಾರೆ.

ದುರ್ಗಾದೇವಿ ದರ್ಶನ ಪಡೆಯಲಿರುವ ಡಿಕೆಶಿ: ಇನ್ನು ಎರಡು ದಿನಗಳ ಈ ಉತ್ಸವ ನಿನ್ನೆಯಿಂದ ಶುರುವಾಗಿದ್ದು, ಇವತ್ತು ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್ ದುರ್ಗಾದೇವಿ ದರ್ಶನ ಪಡೆಯಲಿದ್ದಾರೆ. ಕಳೆದ ವರ್ಷ ಡಿಕೆಶಿ ಜಾತ್ರೆಗೆ ಬರುತ್ತೇನೆಂದು ಬಾರದಿದ್ದಕ್ಕೆ ಇಡಿ ಸಂಕಷ್ಟ ಎದುರಾಗಿತ್ತು ಅಂತಿದ್ದಾರೆ ಇಲ್ಲಿನ ಅರ್ಚಕರು. ಹೀಗಾಗಿ ಈ ಬಾರಿ ಜಾತ್ರೆಯಲ್ಲಿ ಭಾಗಿಯಾಗಿ ಡಿಕೆಶಿ ದೇವಿಗೆ ಪೂಜೆ ಸಲ್ಲಿಸಲಿದ್ದಾರಂತೆ. ಹತ್ತೂರ ಮಂದಿ ಪಾಲಿಗೆ ಶಕ್ತಿ ದೇವತೆ ಆಗಿರೋ ಗಡ್ಡಿ ದುರ್ಗಾದೇವಿ ಜಾತ್ರೆ ಅದ್ಧೂರಿಯಾಗಿ ನಡೀತಿದೆ. ಅದ್ರಲ್ಲೂ ಈ ಉತ್ಸವದಲ್ಲಿ ಕೋಳಿ, ಹುಂಜ ತೂರೋದೇ ಒಂದು ಸ್ಪೆಷಾಲಿಟಿ.

Published On - 9:02 am, Wed, 29 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ