AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

ಸೆಪ್ಟೆಂಬರ್​ 4ನೇ ತಾರೀಖಿನಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಇದೀಗ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ.

ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on: Sep 11, 2021 | 9:04 AM

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಇಂದು ಮುಂಜಾನೆ 8.18ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ಊರಿನವರು ಹೇಳಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ಈ ಅನುಭವ ಆಗಿರುವುದು ಸಹಜವಾಗಿ ಭಯಕ್ಕೆ ಕಾರಣವಾಗಿದೆ. ಸೆಪ್ಟೆಂಬರ್​ 4ನೇ ತಾರೀಖಿನಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಇದೀಗ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ.

ಒಂದು ವಾರದ ಹಿಂದೆ ಭೂಕಂಪ ಆಗಿರುವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಇಂದು ಭೂಮಿ ನಡಗಿರುವ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದ್ದು, ಪದೇ ಪದೇ ಹೀಗೆ ಆಗುತ್ತಿರುವುದಕ್ಕೆ ಕಾರಣವೇನು? ಇದರಿಂದ ಏನಾದರೂ ಅಪಾಯವಿದೆಯೇ? ಇದು ಯಾವುದಾದರೂ ಅವಘಡದ ಮುನ್ಸೂಚನೆಯೇ? ಎಂದು ಜನ ಆತಂಕದಲ್ಲಿದ್ದಾರೆ.

ಕಳೆದ ವಾರ ಆಗಿದ್ದೇನು? ವಿಜಯಪುರ ಜಿಲ್ಲೆಯಾದ್ಯಂತ ಕಳೆದ ವಾರ 11.47ಕ್ಕೆ ಭೂಮಿ ಕಂಪಿಸಿದ (Earthquake) ಅನುಭವವಾಗಿದೆ. ರಾತ್ರಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಮೊದಲಿಗೆ ಎರಡು ಕ್ಷಣಗಳ ಕಾಲ ಭೂಮಿಯಿಂದ ವಿಚಿತ್ರ ಶಬ್ದ ಕೇಳಿ‌ ಬಂದಿದೆ. ನಂತರ ಭೂಮಿ ನಡುಗಿದ ಅನುಭವವಾಗಿದೆ. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆದಿದ್ದಾರೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.9ರಷ್ಟು ದಾಖಲಾಗಿದೆ. ಅದರಂತೆ ಬಾಗಲಕೋಟೆಯಲ್ಲೂ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ 11.50ಕ್ಕೆ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹೇಳಲಾಗಿತ್ತು. ಬಾಗಲಕೋಟೆ, ಜಮಖಂಡಿ ತಾಲೂಕಿನಲ್ಲಿ ಕಂಪನದ ಅನುಭವವಾಗಿದ್ದು, ಈ ಬಗ್ಗೆ ಬಾಗಲಕೋಟೆ ಜಿಲ್ಲಾಡಳಿತ ಖಚಿತಪಡಿಸಿದೆ. ಅಂಕಲಗಿ ಗ್ರಾಮದಲ್ಲಿ ಭೂಕಂಪನದ ಅನುಭವವಾದ ಹಿನ್ನೆಲೆ ಕೊಟ್ಟಿಗೆಯಲ್ಲಿ ದನಕರುಗಳು ಎದ್ದು ನಿಂತಿರುವುದು ತಿಳಿದುಬಂದಿದೆ. ಕೆ.ಎಲ್.ಬಿಲ್.ಕೇರಿ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸುಗಳು ಭೂಕಂಪನ ಅನುಭವಕ್ಕೆ ದಿಢೀರನೆ ಎದ್ದು ನಿಂತಿದ್ದವು ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವಾರ ರಾತ್ರಿ 11.43 ರ ಸುಮಾರಿಗೆ ನಮಗೆ ಭೂಕಂಪನದ ಅನುಭವ ಆಗಿದೆ. ಹತ್ತರಿಂದ ಹನ್ನೆರಡು ಸೆಕೆಂಡುಗಳ ಕಾಲ ಭೂಕಂಪಿಸಿದ ಅನುಭವ ನಮಗೆ ಆಗಿದೆ. ರೋಲರ್ ಸಂಚರಿಸುವ ವೇಳೆ ಬರುವ ಶಬ್ದದ ಹಾಗೆ ಶಬ್ದ ಕೇಳಿಸಿದೆ. 10ರಿಂದ 12 ಸೆಕೆಂಡ್‌ ಕಾಲ ಕಂಪನದ ಅನುಭವ ಆಗಿದೆ. ನಮ್ಮ ಮನೆಯ ಸದಸ್ಯರು ಹೊರಗೆ ಬಂದು ನಿಂತಿದ್ದೆವು. ಮಕ್ಕಳು, ಮನೆಮಂದಿ ಭಯಗೊಂಡಿದ್ದರು ಎಂದು ಬಾಗಲಕೋಟೆ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಸಲೀಮ್ ಶೇಕ್ ತಿಳಿಸಿದ್ದರು. ಭೂಕಂಪನದ ಪರಿಣಾಮ ಸಲೀಮ್ ಶೇಖ್ ಅವರ ಮನೆ ಗೋಡೆ ಮೇಲೆ ಚಿಕ್ಕದಾಗಿ ಬಿರುಕು ಕೂಡಾ ಕಾಣಿಸಿಕೊಂಡಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೂಕಂಪನ; 3.9ರಷ್ಟು ತೀವ್ರತೆ ದಾಖಲು, ಭಯದಲ್ಲಿ ಜನ 

Earthquake: ಬಾಗಲಕೋಟೆಯಲ್ಲೂ ಭೂಕಂಪನ ಅನುಭವ; ಖಚಿತಪಡಿಸಿದ ಜಿಲ್ಲಾಡಳಿತ

(Earthquake experience in Vijayapura for the second time in a weekQ)

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?