AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Facebook Live | ನಮ್ಮ ಭವಿಷ್ಯದೊಂದಿಗೆ ಚೆಲ್ಲಾಟ ಬೇಡ; ಎಂಜಿನಿಯರಿಂಗ್​ ಪರೀಕ್ಷೆ ದಿನಾಂಕ ಬದಲಿಸಿ

ಫೆಬ್ರುವರಿ 8ರಂದು ಎಂಜನಿಯರಿಂಗ್ ಪರೀಕ್ಷೆ ಹಾಗೂ 6ರಿಂದ ಗೇಟ್​ ಪರೀಕ್ಷೆ ವೇಳಾಪಟ್ಟಿ ಬಂದಿದೆ. ಒಟ್ಟೊಟ್ಟಿಗೆ ಪರೀಕ್ಷೆ ಎದುರಾದರೆ ವಿದ್ಯಾರ್ಥಿಗಳು ಹೇಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯ?

Tv9 Facebook Live | ನಮ್ಮ ಭವಿಷ್ಯದೊಂದಿಗೆ ಚೆಲ್ಲಾಟ ಬೇಡ; ಎಂಜಿನಿಯರಿಂಗ್​ ಪರೀಕ್ಷೆ ದಿನಾಂಕ ಬದಲಿಸಿ
ವಿದ್ಯಾರ್ಥಿ ಪ್ರತಿನಿಧಿ ದೀಕ್ಷಿತ್, ಆ್ಯಂಕರ್ ಮಾಲ್ತೇಶ್ ಮತ್ತು ಎಬಿವಿಪಿ ಕಾರ್ಯದರ್ಶಿ ಪ್ರತೀಕ್
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 21, 2021 | 6:21 PM

Share

ಎಂಜಿನಿಯರಿಂಗ್ ಕೊನೆಯ ವರ್ಷ ಓದುತ್ತಿರುವ ವಿದ್ಯಾರ್ಥಿಗಳು, ಅಂತಿಮ ವರ್ಷದ ಪರೀಕ್ಷೆ ಬೇಡ ಎಂದು ಒತ್ತಾಯಿಸುತ್ತಿದ್ದಾರೆ. ಈ ಹಕ್ಕೊತ್ತಾಯದ ಹಿಂದಿನ ಕಾರಣದ ಬಗ್ಗೆ ಗುರುವಾರ ಟಿವಿ9 ಕನ್ನಡ ಫೇಸ್​ಬುಕ್​ ಲೈವ್​ನಲ್ಲಿ​ ಚರ್ಚೆ ನಡೆಯಿತು. ವಿದ್ಯಾರ್ಥಿ ದೀಕ್ಷಿತ್, ಎಬಿವಿಪಿ ಕಾರ್ಯದರ್ಶಿ ಪ್ರತೀಕ್, ಎನ್​ಎಸ್​ಯುಐ ಕಾರ್ಯದರ್ಶಿ ಮನೀಶ್ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಟಿವಿ9 ಆ್ಯಂಕರ್ ಮಾಲ್ತೇಶ್ ಚರ್ಚೆ ನಡೆಸಿಕೊಟ್ಟರು.

ಫೆ.8ರಿಂದ ಎಂಜಿನಿಯರಿಂಗ್ 7ನೇ ಸೆಮಿಸ್ಟರ್​ನ ಪರೀಕ್ಷೆ ಹಾಗೂ 6ರಿಂದ ಗೇಟ್​ ಪರೀಕ್ಷೆ ವೇಳಾಪಟ್ಟಿ ಬಂದಿದೆ. ಒಟ್ಟೊಟ್ಟಿಗೆ ಪರೀಕ್ಷೆ ಎದುರಾದರೆ ವಿದ್ಯಾರ್ಥಿಗಳು ಹೇಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯ? ಸ್ವಾಯುತ್ತ​ ಕಾಲೇಜುಗಳು ಗೇಟ್​ ಪರೀಕ್ಷೆ ಬರೆದ ನಂತರ ಎಂಜಿನಿಯರಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಆದರೆ VTU ಮಾತ್ರ ಈ ನಿರ್ಧಾರ ಕೈಗೊಂಡಿಲ್ಲ. ಇದು ವಿದ್ಯಾರ್ಥಿಗಳಿಗೆ ಸಂಕಷ್ಟವನ್ನುಂಟು ಮಾಡಿದೆ.

ಚರ್ಚೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ದೀಕ್ಷಿತ್​ ಮಾತನಾಡಿ, ಗೇಟ್​ ಮತ್ತು ಎಂಜಿನಿಯರಿಂಗ್ ಪರೀಕ್ಷೆ ಒಟ್ಟೊಟ್ಟಿಗೆ ಎದುರಾಗಿದೆ. ಯಾವ ಪರೀಕ್ಷೆಯ ಬಗ್ಗೆ ನಾವು ಗಮನ ಹರಿಸಬೇಕು ಎಂಬ ಗೊಂದಲ ಸೃಷ್ಟಿಯಾಗಿದೆ. ಈ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ. ಇದರಲ್ಲಿ ಯಾವುದೇ ಒಂದು ಪರೀಕ್ಷೆಯನ್ನೂ ನಾವು ಬಿಡುವಂತಿಲ್ಲ. ಅಂತಿಮ ವರ್ಷದ ಪರೀಕ್ಷೆ ಎದುರಿಸುತ್ತಿರುವ ಅರ್ಧದಷ್ಟು ವಿದ್ಯಾರ್ಥಿಗಳು ಗೇಟ್​ ಪರೀಕ್ಷೆಗೆ ತಯಾರಾಗಿದ್ದಾರೆ. ಒಂದೇ ಬಾರಿ ಎರಡು ಪರೀಕ್ಷೆಗಳು ಎದುರಾದರೆ ಕಷ್ಟವಾಗುತ್ತೆ ಎಂದು ಅಭಿಪ್ರಾಯಪಟ್ಟರು.

ಫೇಸ್​ಬುಕ್ ಲೈವ್ ಚರ್ಚೆಯ ವಿಡಿಯೊ ಇಲ್ಲಿದೆ…

ಈ ಕುರಿತಂತೆ ಮಾತನಾಡುತ್ತಿದ್ದ ದೀಕ್ಷಿತ್, ಸ್ವಾಯುತ್ತ ಕಾಲೇಜುಗಳು ಎಂಜಿನಿಯರಿಂಗ್ ಪರೀಕ್ಷೆ ಮುಂದೂಡಲು ಅವಕಾಶ ನೀಡಿದೆ. ಈ ನಿಟ್ಟಿನಲ್ಲಿ VTU ಸಹ ಗಮನ ಹರಿಸಬೇಕು. ವಿಶ್ವವಿದ್ಯಾಲಯವು ಈ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ ಎಂದರು.

ಎಬಿವಿಪಿ ಕಾರ್ಯದರ್ಶಿ ಪ್ರತೀಕ್ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳು ನಮಗೆ ತಿಳಿದಿದೆ. ಗೇಟ್​ ಪರೀಕ್ಷೆಯನ್ನು ಮುಂದೂಡಲು ಸಾಧ್ಯವಿಲ್ಲ. ಆದರೆ ಎಂಜಿನಿಯರಿಂಗ್ ಪರೀಕ್ಷೆ ಮೂಂದೂಡಲು ಅವಕಾಶವಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಗೊಂದಲಕ್ಕೆ ಕಾರಣ. ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ, ವಿದ್ಯಾರ್ಥಿಗಳ ಬಗ್ಗೆ ಕಾಳಜಿಯೇ ಇಲ್ಲ ಎಂದೆನಿಸುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಕೆಲವೇ ದಿನಗಳಲ್ಲಿ ವಿಶ್ವವಿದ್ಯಾಲಯಕ್ಕೆ ಭೇಟಿ ಕೊಟ್ಟು ಈ ಕುರಿತು ಚರ್ಚಿಸಿ, ವೇಳಾಪಟ್ಟಿ ಪರಿಷ್ಕರಣೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಎನ್​ಎಸ್​ಯುಐ ಕಾರ್ಯದರ್ಶಿ ಮನೀಶ್ ಮಾತನಾಡಿ, ಕಳೆದ ಹಲ ದಿನಗಳಿಂದ ಈ ಸಮಸ್ಯೆಯನ್ನು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಆದರೆ ಅಧಿಕಾರಿಗಳು ಈ ಕುರಿತು ಗಮನ ಹರಿಸುವಂತೆ ಕಾಣುತ್ತಿಲ್ಲ. ಆನ್​ಲೈನ್ ಕ್ಲಾಸ್​ಗಳನ್ನು ಮಾಡಿ, ಆಫ್​ಲೈನ್​ ಪರೀಕ್ಷೆಯನ್ನು ಮಾಡಿದರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಷ್ಟವಾಗುತ್ತದೆ. ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ ವಿದ್ಯಾರ್ಥಿ ಸಂಘಟನೆಗಳ ಜವಾಬ್ದಾರಿ. ನಾವು ಶೀಘ್ರ ಅಧಿಕಾರಿಗಳನ್ನು ಸಂಪರ್ಕಿಸಿ, ವಿದ್ಯಾರ್ಥಿಗಳ ಸಮಸ್ಯೆಯನ್ನು ಗಮನಕ್ಕೆ ತರುತ್ತೇವೆ. ವಿದ್ಯಾರ್ಥಿಗಳಿಗೆ ಬೆನ್ನ ಹಿಂದೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.

Facebook Live| ವರ್ಕ್​ ಫ್ರಮ್ ಹೋಮ್​ನಿಂದ ಉಂಟಾಗುತ್ತಿರುವ ಸಮಸ್ಯೆಗಳೇನು ಗೊತ್ತಾ?: ಇಲ್ಲಿದೆ ತಜ್ಞರ ಅಭಿಪ್ರಾಯ

Published On - 6:21 pm, Thu, 21 January 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ