ಆರೋಗ್ಯ ಸಚಿವ ರಾಮುಲು ತವರು ಜಿಲ್ಲೆಯಲ್ಲೂ ಕಿಲ್ಲರ್ ಕೊರೊನಾ ಅಟ್ಟಹಾಸ

ಬಳ್ಳಾರಿ: ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆ ಅಷ್ಟೇ ಅಲ್ಲ, ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೂ ಸೋಂಕಿತರ ಜೀವವನ್ನು ಕಿಲ್ಲರ್ ಕೊರೊನಾ ಕಸಿಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 22 ಜನ ಮೃತಪಟ್ಟಿದ್ದಾರೆ. ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ  52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ವ್ಯಕ್ತಿ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷದ ವ್ಯಕ್ತಿ, ಹಾಗೂ ಹೊಸಪೇಟೆಯ ಆಜಾದ್ ನಗರದ […]

ಆರೋಗ್ಯ ಸಚಿವ ರಾಮುಲು ತವರು ಜಿಲ್ಲೆಯಲ್ಲೂ ಕಿಲ್ಲರ್ ಕೊರೊನಾ ಅಟ್ಟಹಾಸ
ಸಾಧು ಶ್ರೀನಾಥ್​

Updated on: Jun 29, 2020 | 2:07 PM

ಬಳ್ಳಾರಿ: ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆ ಅಷ್ಟೇ ಅಲ್ಲ, ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೂ ಸೋಂಕಿತರ ಜೀವವನ್ನು ಕಿಲ್ಲರ್ ಕೊರೊನಾ ಕಸಿಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 22 ಜನ ಮೃತಪಟ್ಟಿದ್ದಾರೆ.

ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ  52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ವ್ಯಕ್ತಿ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷದ ವ್ಯಕ್ತಿ, ಹಾಗೂ ಹೊಸಪೇಟೆಯ ಆಜಾದ್ ನಗರದ 66 ವರ್ಷ ಪುರುಷ ಸೇರಿದಂತೆ ಇಂದು 8 ಮಂದಿ ಸಾವಿಗೀಡಾಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ 22 ಮಂದಿ ಮೃತಪಟ್ಟಿದ್ದಾರೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.

Published On - 2:00 pm, Mon, 29 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us