
ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ 4 ವರ್ಷದ ಬಾಲಕ ಅಸುನೀಗಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.
ಮನೆಯ ಮಹಡಿಯ ಮೇಲೆ ಆಟವಾಡುತ್ತಿದ್ದ ಧನುಷ್ ಸಾವನ್ನಪ್ಪಿದ ದುರ್ದೈವಿ ಮಗು. ಕೆಪಿಟಿಸಿಎಲ್ ನಿರ್ಲಕ್ಷ್ಯದಿಂದ ಬಾಲಕ ಸಾವಿಗೀಡಾಗಿದ್ದಾನೆ ಎಂದು ಮೃತ ಬಾಲಕ ಧನುಷ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.