AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಹೋದವ ವಿದ್ಯುತ್​ಗೆ ಬಲಿ: ರೈತನ ಸಾವಿಗೆ ಮರುಗಿದ ಜನ

ಹಾವೇರಿ: ಮುಂಗಾರು ಮಳೆ ಶುರುವಾಗಿದೆ. ಆಗಾಗ ಮಳೆರಾಯ ಬರುತ್ತಲೆ ಇದ್ದಾನೆ. ಮಳೆ ಆಗಾಗ ಬರುತ್ತಿರುವುದರಿಂದ ಎಲ್ಲೆಲ್ಲೂ ತೇವಾಂಶವಿದೆ. ಆದರೆ ಜಮೀನಿನಲ್ಲಿದ್ದ ಬೋರ್ ವೆಲ್ ಆನ್​ ಮಾಡಲು ಹೋಗಿದ್ದ ರೈತನೊಬ್ಬನಿಗೆ ಕರೆಂಟ್ ಶಾಕ್ ನೀಡಿದೆ. ಈ ಘಟನೆ ನಡೆದಿರುವುದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕೇರಿಹೊಸಳ್ಳಿ ಗ್ರಾಮದಲ್ಲಿ. ಗ್ರಾಮದ ರೈತ 52 ವರ್ಷದ ಚಂದ್ರಪ್ಪ ಜನಗೇರಿ ಎಂಬಾತ ಬಹಳ ದಿನಗಳ ಕಾಲ ಬೋರ್ ವೆಲ್ ಆನ್​ ಮಾಡದೆ ಬಿಟ್ಟರೆ ತುಕ್ಕು ಹಿಡಿಯುತ್ತದೆ ಎಂದು ಭಾವಿಸಿ ಬೋರ್ ವೆಲ್ ಆನ್​ […]

ಜಮೀನಿಗೆ ಹೋದವ ವಿದ್ಯುತ್​ಗೆ ಬಲಿ: ರೈತನ ಸಾವಿಗೆ ಮರುಗಿದ ಜನ
ಸಾಧು ಶ್ರೀನಾಥ್​
|

Updated on: Jul 17, 2020 | 10:16 AM

Share

ಹಾವೇರಿ: ಮುಂಗಾರು ಮಳೆ ಶುರುವಾಗಿದೆ. ಆಗಾಗ ಮಳೆರಾಯ ಬರುತ್ತಲೆ ಇದ್ದಾನೆ. ಮಳೆ ಆಗಾಗ ಬರುತ್ತಿರುವುದರಿಂದ ಎಲ್ಲೆಲ್ಲೂ ತೇವಾಂಶವಿದೆ. ಆದರೆ ಜಮೀನಿನಲ್ಲಿದ್ದ ಬೋರ್ ವೆಲ್ ಆನ್​ ಮಾಡಲು ಹೋಗಿದ್ದ ರೈತನೊಬ್ಬನಿಗೆ ಕರೆಂಟ್ ಶಾಕ್ ನೀಡಿದೆ. ಈ ಘಟನೆ ನಡೆದಿರುವುದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕೇರಿಹೊಸಳ್ಳಿ ಗ್ರಾಮದಲ್ಲಿ.

ಗ್ರಾಮದ ರೈತ 52 ವರ್ಷದ ಚಂದ್ರಪ್ಪ ಜನಗೇರಿ ಎಂಬಾತ ಬಹಳ ದಿನಗಳ ಕಾಲ ಬೋರ್ ವೆಲ್ ಆನ್​ ಮಾಡದೆ ಬಿಟ್ಟರೆ ತುಕ್ಕು ಹಿಡಿಯುತ್ತದೆ ಎಂದು ಭಾವಿಸಿ ಬೋರ್ ವೆಲ್ ಆನ್​ ಮಾಡಲು ಹೋಗಿದ್ದಾನೆ. ಈ ವೇಳೆ ಬೋರ್ ವೆಲ್​ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ತಂತಿ ತುಂಡಾಗಿ ರೈತನಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಹೀಗಾಗಿ ರೈತ ಚಂದ್ರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರೈತನ ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತ ರೈತ ಚಂದ್ರಪ್ಪನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಣ್ಣೀರು ಹಾಕಿದರು. ಸ್ಥಳಕ್ಕೆ ಧಾವಿಸಿದ ಹಾನಗಲ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.

ರೈತರೇ ಎಚ್ಚರಾ ಎಚ್ಚರ ಈಗ ಮಳೆ ಆಗುತ್ತಿರುವುದರಿಂದ ಭೂಮಿ ತೇವಾಂಶ ಆಗಿರುತ್ತದೆ. ಜೊತೆಗೆ ಮಳೆ ಗಾಳಿಗೆ ಅಲ್ಲಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿರುತ್ತವೆ. ಹೀಗಾಗಿ ಮಳೆ ಬರುವ ಸಮಯದಲ್ಲಿ ಬೋರ್ ವೆಲ್ ಸೇರಿದಂತೆ ಜಮೀನಿನಲ್ಲಿರುವ ವಿದ್ಯುತ್ ಉಪಕರಣಗಳನ್ನು ಎಚ್ಚರಿಕೆಯಿಂದ ಮುಟ್ಟಬೇಕಾಗಿದೆ. ಇಲ್ಲದಿದ್ದರೆ ವಿದ್ಯುತ್ ಸ್ಪರ್ಶಿಸಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ರೈತರು ಎಚ್ಚರಿಕೆಯಿಂದ ಜಮೀನಿನಲ್ಲಿ ಕೆಲಸ ಮಾಡಬೇಕಿದೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು